ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜನ ಸ್ವಾಭಿಮಾನಿಗಳು ನೋಟು ಜೊತೆಗೆ ಓಟು ನೀಡಿರುವುದು ಇತಹಾಸ, ಕ್ಷೇತ್ರದ ಮತದಾರರ ಯಾವುದೇ ಕಾರಣಕ್ಕೂ ಹಣದಾಸೆದಾಗಿ ಮತವನ್ನು ಮಾರಾಟ ಮಾಡಿಕೊಳ್ಳುವುದಿಲ್ಲ ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುತ್ತೇವೆ ಎಂಬುದು ತಿರುಕನ ಕನಸು ಎಂದು ಜೆಡಿಎಸ್ ಅಭ್ಯರ್ಥಿ ಮೇಲೂರು ರವಿಕುಮಾರ್ ಪರೋಕ್ಷವಾಗಿ ವಿರೋಧ ಪಕ್ಷಗಳ ವಿರುಧ್ಧ ವಾಗ್ದಾಳಿ ನಡೆಸಿದರು.
ತಾಲೂಕಿನ ಮೇಲೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಷೇತ್ರದಲ್ಲಿ ಸಮಾಜಸೇವೆ ಮಾಡುವ ನೆಪದಲ್ಲಿ ಕಾಲಿಟ್ಟಿರುವ ಕೆಲವರು ಹಣದ ಹೊಳೆ ಹರಿಸಿ ಚುನಾವಣೆಯನ್ನು ಗೆಲ್ಲಲು ಹೊರಟಿದ್ದಾರೆ ಅದು ಎಂದಿಗೂ ಸಾಧ್ಯವಾಗುವುದಿಲ್ಲ ಕ್ಷೇತ್ರದ ಮತದಾರರು ಸ್ವಾಭಿಮಾನಿಗಳಾಗಿದ್ದಾರೆ ಡೋಂಗಿ ಸಮಾಜಸೇವಕರು ಮತ್ತು ವಲಸಿಗರ ಆಟ ನಡೆಯುವುದಿಲ್ಲ ಹಣ ಹಂಚಿ ಮತ ಪಡೆಯುವರಿಗೆ ಇಲ್ಲಿ ಅವಕಾಶವಿಲ್ಲವೆಂದು ಕಿಡಿಕಾರಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಳ್ಳೆಯ ಶಿಕ್ಷಣ ಸಂಸ್ಥೆಗಳು ಮತ್ತು ಆರೋಗ್ಯ ಕೇಂದ್ರಗಳನ್ನು ತೆರೆದು ರೈತರ ಸಮಸ್ಯೆಗಳನ್ನು ಬಗೆಹರಿಸಲು ಆದ್ಯತೆ ನೀಡಲಾಗುವುದು ಎಂದರಲ್ಲದೆ ನಿರುದ್ಯೋಗಿಗಳಿಗೆ ಉದ್ಯೋಗ ಮತ್ತು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ಎಲ್ಲಾ ರೀತಿಯ ನೆರವು ಕಲ್ಪಿಸಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಥಮ ಆದ್ಯತೆ ನೀಡಿ ಕರ್ನಾಟಕ ರಾಜ್ಯದಲ್ಲಿ ಕುಮಾರಣ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕೆಲಸವನ್ನು ಮಾಡುತ್ತೇವೆ ಜೊತೆಗೆ ಮಹಿಳಾ ಸ್ವಸಹಾಯ ಸಂಘಗಳು ಮಾಡಿರುವ ಸಾಲವನ್ನು ಸಹ ಮನ್ನಾ ಮಾಡುತ್ತೇವೆ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ವಿನೂತನವಾದ ವಿಶಿಷ್ಟ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಅಂಬೇಡ್ಕರ್ ವಿರೋಧಿ ಕಾಂಗ್ರೆಸ್: ಕಾಂಗ್ರೆಸ್ ಪಕ್ಷ ಬರ್ನಿಂಗ್ ಹೌಸ್ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು ಅಂಬೇಡ್ಕರ್ ಅವರ ಅನುಯಾಯಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದಿಲ್ಲ ಎಂದ ಅವರು ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನವನ್ನು ರಚಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಆದರ್ಶವನ್ನು ನಾವೆಲ್ಲರು ಪಾಲಿಸಬೇಕು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಅವರ ಪತ್ನಿ ಚೆನ್ನಮ್ಮ, ರೈತರ ಕಣ್ಮಣಿ ಕುಮಾರಣ್ಣ ಅವರ ಆಶೀರ್ವಾದ ಪಡೆದು ಏಪ್ರಿಲ್17 ನಾಮಪತ್ರ ಸಲ್ಲಿಸುತೇನೆ ಎಂದರು.
ದಲಿತ ನಾಯಕನಿಗೆ ಸೋಲಿಸಿದ ಶಾಸಕ: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರನ್ನು ಹಾಲಿ ಶಾಸಕ ಹಾಗೂ ಮಾಜಿ ಸಚಿವ ವಿ.ಮುನಿಯಪ್ಪ ಮತ್ತಿತರರು ಪಕ್ಷ ವಿರೋಧಿ ಕೆಲಸವನ್ನು ಮಾಡಿ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ದಲಿತ ವಿರೋಧಿ ಧೋರಣೆಯನ್ನು ಅನುಸರಿಸಿದರು ಎಂದು ದೂರಿದ ಅವರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ 242 ಮತಗಟ್ಟೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪಕ್ಷಾಂತರ ಮಾಡಿಲ್ಲ ಜೆಡಿಎಸ್ ಪಕ್ಷದವರು ಸೇರ್ಪಡೆಯಾಗುತ್ತಿದ್ದಾರೆ ಎಂದು ಪ್ರಚಾರ ಪಡೆದುಕೊಳ್ಳುತ್ತಿರುವುದು ಹಾಸ್ಯಸ್ಪದವೆಂದು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ರಾಮಚಂದ್ರಗೌಡ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ ಶಾಸಕರ ದಲಿತ ವಿರೋಧಿ ನಿಲುವುನಿಂದ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಸುಧ್ಧಿಗೋಷ್ಠಿಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟೇಶ್, ಜಿಪಂ ಮಾಜಿ ಸದಸ್ಯ ಬಂಕ್ ಮುನಿಯಪ್ಪ, ಮುಖಂಡರಾದ ಎಸ್.ರಹಮತ್ತುಲ್ಲಾ, ಮೇಲೂರು ಮಂಜುನಾಥ್, ಹುಜಗೂರು ರಾಮಯ್ಯ, ತಾಪಂ ಮಾಜಿ ಅಧ್ಯಕ್ಷ ಬಶೆಟ್ಟಿಹಳ್ಳಿ ನಾರಾಯಣಸ್ವಾಮಿ, ಲಕ್ಷ್ಮೀನಾರಾಯಣರೆಡ್ಡಿ, ಪೂಲಕುಂಟಹಳ್ಳಿ ರಘುನಾಥ್ರೆಡ್ಡಿ, ಗಂಜಿಗುಂಟೆ ನರಸಿಂಹಮೂರ್ತಿ, ಡಾ.ಧನುಂಜಯರೆಡ್ಡಿ,ನಂದವನ ಶ್ರೀರಾಮರೆಡ್ಡಿ, ಇ.ತಿಮ್ಮಸಂದ್ರ ಶಿವಾರೆಡ್ಡಿ, ತಾದೂರು ರಘು, ಕೆ.ಎಸ್.ಮಂಜುನಾಥ್, ಮೇಲೂರು ಉಮೇಶ್, ಮುಬಾರಕ್ ಖಾನ್(ಮುಬ್ಬು) ಹೈದರ್ ಅಲೀ, ರಮೇಶ್, ನವೀನ್, ನಂದಕಿಶನ್, ರಾಘವೇಂದ್ರ, ಎಂಪಿ ಮುಶ್ತಾಖ್, ಆಜಂಪಾಷ, ಅಂಜದ್, ಸಿಎಂ ಬಾಬು, ವಿಜೇಂದ್ರ, ಸಿಕಂದರ್, ಬಚ್ಚರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಬಾಕ್ಸ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕರು ಟೋಪಿ ರಾಜಕಾರಣ ಮಾಡಿದರು ನಮ್ಮ ನಿಷ್ಠೆಯನ್ನು ದುರುಪಯೋಗ ಮಾಡಿಕೊಂಡರು ಎಂದು ತಾಲೂಕು ಜೆಡಿಎಸ್ ಮಾಜಿ ಅಧ್ಯಕ್ಷ ಡಾ.ಧನುಂಜಯರೆಡ್ಡಿ ಮತ್ತು ರಾಜ್ಯ ಜೆಡಿಎಸ್ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್ ರಹಮತ್ತುಲ್ಲಾ ದೂರಿದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.