ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಆದರ್ಶಗಳನ್ನು ನಾವೆಲ್ಲರು ಪಾಲಿಸಿ ಒಳ್ಳೆಯ ಸಮಾಜವನ್ನು ನಿರ್ಮಿಸಬೇಕೆಂದು ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಕರೆ ನೀಡಿದರು.
ನಗರದ ಮಯೂರ ವೃತ್ತದಲ್ಲಿರುವ ಸೇವಾಸೌಧ ಬಿಜೆಪಿ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿರುವ ಎಲ್ಲಾ ಜಾತಿ ಧರ್ಮ ಮತ್ತು ವರ್ಗಗಳ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಶ್ರೇಷ್ಠ ಸಂವಿಧಾನವನ್ನು ರಚಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತಗೊಳಿಸಬಾರದು ಅವರು ವಿಶ್ವದ ಶ್ರೇಷ್ಠ ನಾಯಕರು ಎಂದು ಬಣ್ಣಿಸಿದರು.
ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾಜವನ್ನು ಕಾಂಗ್ರೆಸ್ ಪಕ್ಷ ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ ವಿನಃ ಈ ಸಮಾಜದವರು ಶೈಕ್ಷಣಿಕ,ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃಧ್ಧಿ ಹೊಂದಲು ಸೂಕ್ತ ಸ್ಥಾನವನ್ನು ಕಲ್ಪಿಸಿಲ್ಲ ಆದರೇ ಬಿಜೆಪಿ ಸರ್ಕಾರ ಈ ಸಮುದಾಯಗಳಿಗೆ ಇದ್ದ ಮೀಸಲಾತಿಯನ್ನು ಪರಿಷ್ಕರಿಸಿ ಸಾಮಾಜಿಕ ನ್ಯಾಯ ಕಲ್ಪಿಸಿದೆ ಸಮಾಜದವರು ಈ ವಿಚಾರವನ್ನು ಅರ್ಥ ಮಾಡಿಕೊಂಡು ಬಿಜೆಪಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಎಸ್ಸಿಪಿ-ಟಿಎಸ್ಪಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ಸ್ವರೂಪ ಬದಲು: ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾಜದವರು ವಾಸ ಮಾಡುತ್ತಿರುವ ಪ್ರದೇಶವನ್ನು ಅಭಿವೃಧ್ಧಿಗೊಳಿಸಲು ಎಸ್ಸಿಪಿ-ಟಿಎಸ್ಪಿ ಯೋಜನೆಯನ್ನು ಜಾರಿಗೊಳಿಸಿದ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಎಸ್ಸಿ ಮತ್ತು ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ ಸಹಿತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿ, ಇಂದು ದೇಶದಲ್ಲಿ ಸಾಮಾಜಿಕ ನ್ಯಾಯ ಉಳಿದುಕೊಂಡಿದೆ ಎಂಬುದಕ್ಕೆ ಅಂಬೇಡ್ಕರ್ ಅವರ ಸಂವಿಧಾನ ಸಾಕ್ಷಿಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಸಮನಾದ ಮೀಸಲಾತಿ ಕಲ್ಪಿಸಿದ ಏಕೈಕ ರಾಜ್ಯ ಕರ್ನಾಟಕ ಅದರಲ್ಲಿಯೂ ಮೀಸಲಾತಿಯನ್ನು ಜಾರಿಗೊಳಿಸಿದ್ದು ಬಿಜೆಪಿ ಪಕ್ಷ ಎಂಬುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ದಲಿತ ಪರ ನಿಜವಾದ ಕಾಳಜಿ ಇರುವುದು ಬಿಜೆಪಿ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ವಕ್ತಾರ ರಮೇಶ್ ಬಾಯಿರಿ,ಸೀಕಲ್ ಆನಂದ ಗೌಡ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರ ಗೌಡ, ಬಿಸಿ ನಂದೀಶ್, ಮಧು, ಕನಕಪ್ರಸಾದ್, ದಾಮೋದರ್,ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಆಂಜಿನೇಯಗೌಡ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು, ಕಾರ್ಯಕ್ರಮದ ನಂತರ ಸಿಹಿ ನೆರೆದಿದ್ದವರಿಗೆ ಸಿಹಿ ಹಂಚಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಜಯಘೋಷಗಳನ್ನು ಕೂಗಿದರು.
ವರದಿ:ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.