ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ):ಶಂಕರಾಚಾರ್ಯರು ಬೋಧಿಸಿದ ಸತ್ಯದ ದರ್ಶನವೆಂದರೆ ನುಡಿದಂತೆ ನಡೆಯುವುದು. ಅವರು ತಮ್ಮ ತತ್ವ ಸಿದ್ಧಾಂತಗಳಲ್ಲಿ ಯಾರನ್ನು ತುಳಿಯಬಾರದು, ಎಲ್ಲಾ ಚರಾಚರ ಹಾಗೂ ಲೌಕಿಕ- ಅಲೌಕಿಕ ವಸ್ತುಗಳಿಗೂ ಬದುಕುವ ಹಕ್ಕಿದೆ ಎಂದು ಪ್ರತಿಪಾದಿಸಿದವರು ಎಂದು ಅಪರ ಜಿಲ್ಲಾಧಿಕಾರಿ ವೀಣ್ ಬಿ. ಎನ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಸಲ್ಲಿಸಿ ಮಾತನಾಡಿದರು.ಸಮಯಕ್ಕೆ ಬೆಲೆ ಕೊಟ್ಟು ತಮ್ಮ 32 ವರ್ಷ ಜೀವಿತಾವಧಿಯಲ್ಲಿ ಇಡೀ ದೇಶವನ್ನು ಸುತ್ತಿ, ಅದ್ವೆöÊತ ತತ್ವದ ಬೋಧನೆಯನ್ನು ಮಾಡಿದ್ದಾರೆ. ಅವರು ಸ್ಥಾಪಿಸಿದ 4 ಮಠಗಳಲ್ಲಿ ಒಂದು ಮಠ ರಾಜ್ಯದ ಶೃಂಗೇರಿಯಲ್ಲಿ ಇರುವುದು ನಮ್ಮ ಹೆಮ್ಮೆ ಎಂದರು.ಶಂಕರಾಚಾರ್ಯರ ಕುರಿತು ಡಾ. ವೈ.ಸುದರ್ಶನ್ ರಾವ್ ಮಾತನಾಡಿ, ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯರಲ್ಲಿ ಶಂಕರಾಚಾರ್ಯರು ಮೊದಲಿಗರು. ಭಾರತೀಯ ಧರ್ಮ ಶಾಸ್ತçಕ್ಕೆ ಅದ್ವೆöÊತ ವೇದಾಂತ ತತ್ವಶಾಸ್ತ್ರವನ್ನು ಕೊಡುಗೆಯಾಗಿ ನೀಡಿದ ಆಚಾರ್ಯರು, ಹಿಂದೂ ಧರ್ಮದ ಬೆಳವಣಿಗೆಗೆ ಧರ್ಮ ಬೋಧನೆ, ಕೀರ್ತನೆಗಳನ್ನು ಮಾಡಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಸಾಹಿತ್ಯ ಪರಿಷತ್ನ ನರಸಿಂಹಮೂರ್ತಿ, ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಸಿ. ಎಸ್. ರಾವ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್. ಪಿ ವಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.