ಲಖ್ನೋ (ವಿಶ್ವ ಕನ್ನಡಿಗ ನ್ಯೂಸ್) : ಉತ್ತರ ಪ್ರದೇಶದ ಕಡಧಾಮ್ ಎಂಬಲ್ಲಿ ಮಕ್ಕಳಾಗಲಿಲ್ಲವೆಂದು ಮಹಿಳೆಯೊಬ್ಬರು ತನ್ನ ಸೊಸೆಯನ್ನು ಹತ್ಯೆಗೈದ ಅಮಾನವೀಯ ಘಟನೆ ನಡೆದಿದೆ. ಕೊಲೆಗೀಡಾದ ಯುವತಿಯನ್ನು ಸಾಲಿ ಬೇಗಂ(33) ಎಂದು ಗುರುತಿಸಲಾಗಿದೆ.
ಇವರಿಗೆ ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈಕೆಯ ಅತ್ತೆ, ಮಗುವಾಗದ ಕಾರಣ ಅವಳ ಜೊತೆ ಜಗಳವಾಡಿ ವಿಷವುಣಿಸಿ ಕೊಲೆ ಮಾಡಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ ಮೃತಳ ಸಹೋದರ ಗೌಸ್ ಮುಹಮ್ಮದ್, ಬೇಗಂ 15 ವರ್ಷಗಳ ಹಿಂದೆ ಫಿರೋಜ್ ಅಹ್ಮದ್ ಎಂಬಾತನೊಂದಿಗೆ ಮದುವೆಯಾಗಿದ್ದಳು. ಅವರಿಗೆ ಮಕ್ಕಳಾಗಿರಲಿಲ್ಲ. ಇದೇ ಕಾರಣಕ್ಕೆ ಅತ್ತೆ ಆಗಾಗ್ಗೆ ಅವಳೊಂದಿಗೆ ಜಗಳವಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ತನಗೆ ಅತ್ತೆ ವಿಷವುಣಿಸಿರುವ ಬಗ್ಗೆ ಗೌಸ್ ಮುಹಮ್ಮದ್ ಬಳಿ ಸಹೋದರಿ ಸಾಲಿ ಬೇಗಂ ಕರೆ ಮಾಡಿ ತಿಳಿಸಿದ್ದು, ಸ್ಥಳಕ್ಕೆ ತೆರಳಿ ನೋಡಿದಾಗ ಆಕೆ ಗಂಭೀರಾವಸ್ಥೆಯಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.