ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿರುವ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಶಾಸಕ ಅಶೋಕ್ ಕುಮಾರ್ ರೈ ಭೇಟಿಯಾಗಿ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ಪೊಲೀಸ್ ದೌರ್ಜನ್ಯದಲ್ಲಿ ಕಾಂಗ್ರೆಸಿನ ಕೈವಾಡ ಇಲ್ಲ ಎನ್ನುವುದು ನಿಮಗೂ ತಿಳಿದಿದೆ. ಪೊಲೀಸರು ಪ್ರಕರಣವನ್ನು ಅಲ್ಲಿಂದಲ್ಲಿಗೆ ಮುಗಿಸುವ ಪ್ರಯತ್ನದಲ್ಲಿದ್ದರು. ಈ ಪ್ರಕರಣದ ವಿಷಯ ತಿಳಿಯುತ್ತಿದ್ದಂತೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆಯನ್ನು ನೀಡಿದ್ದೇನೆ ಎಂದು ಹೇಳಿದರು.
ನಿಮಗೆ ಏನು ಅಗತ್ಯ ಸಹಕಾರ ಬೇಕಿದ್ದರೂ ನನ್ನಲ್ಲಿ ಕೇಳಿ, ನನ್ನಿಂದಾಗುವ ಸಹಕಾರ ಖಂಡಿತಾ ನೀಡುತ್ತೇನೆ ಎಂದು ಅವರು ಗಾಯಾಳುಗಳಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಜೊತೆಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.