ಅಮೃತಸರ (ವಿಶ್ವ ಕನ್ನಡಿಗ ನ್ಯೂಸ್) : ಗ್ಯಾಂಗ್ ವಾರ್ನಲ್ಲಿ ಕುಖ್ಯಾತ ಗ್ಯಾಂಗ್ಸ್ಟರ್ ಜರ್ನೈಲ್ ಸಿಂಗ್ ನನ್ನ ಬರ್ಬರವಾಗಿ ಹತ್ಯೆ ಮಡಿದ ಘಟನೆ ಪಂಜಾಬ್ನ ಅಮೃತಸರದ ಸಾಥಿಯಾಲ ಗ್ರಾಮದಲ್ಲಿ ನಡೆದಿದೆ. ಜರ್ನೈಲ್ ಸಿಂಗ್ ಅವರ ಎದುರಾಳಿ ಗ್ಯಾಂಗ್ನ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಹೆಚ್ಚಿನ ತನಿಖೆ ಆರಂಭಿಸಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿರುವ ಪೊಲೀಸರು ಉನ್ನತ ಮಟ್ಟದ ತನಿಖೆ ಆರಂಭಿಸಿದ್ದಾರೆ. ದಾಳಿಕೋರರು ದರೋಡೆಕೋರ ಜರ್ನೈಲ್ ಸಿಂಗ್ ಮೇಲೆ ಸುಮಾರು 24 ಗುಂಡುಗಳನ್ನು ಹಾರಿಸಿದ್ದಾರೆ. ಜರ್ನೈಲ್ ಸಿಂಗ್ ಗೋಪಿ ಘನಶ್ಯಾಂಪುರಿಯಾ ಗ್ಯಾಂಗ್ನ ಸದಸ್ಯ ಎಂದು ಹೇಳಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ 4 ಮಂದಿ ದಾಳಿಕೋರರು ಕೃತ್ಯ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸುಮಾರು 15 ನಿಮಿಷಗಳ ಕಾಲ ಗುಂಡು ಹಾರಿಸಿ ಜರ್ನೈಲ್ ಸಿಂಗ್ ಅವರನ್ನು ಹತ್ಯೆಗೈಯಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.