ಕೆಮ್ಮಾರ (www.vknews.in) : ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 31-05-2023ರಂದು 2023-24 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ಬಹಳ ಅದ್ಧೂರಿಯಾಗಿ ನಡೆಯಿತು. ಹೊಸ ಶೈಕ್ಷಣಿಕ ವರ್ಷದ ಸಂಭ್ರಮದ ದಿನದಂದು ಬಹಳ ಅತ್ಯುತ್ಸಾಹದಿಂದ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಹಾಗೂ ರಕ್ಷಕ ವೃಂದ ಪುಷ್ಪಾರ್ಚನೆ ಮಾಡುವ ಮೂಲಕ ಬ್ಯಾಂಡ್ ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಶ್ರೀ.ಎಮ್ ರವರು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಗುಣಮಟ್ಟದ ಶಿಕ್ಷಣದಲ್ಲಿ ಪೈಪೋಟಿ ನೀಡುತ್ತಿದೆ. ಇಂತಹ ಕಾರ್ಯಕ್ರಮಗಳು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಪೂರಕವಾಗಲಿದೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ಶೆಟ್ಟಿ ಬಡಿಲ ಮಾತನಾಡಿ ಸರಕಾರಿ ಶಾಲೆಯಲ್ಲಿ ಇಂತಹ ಶಿಕ್ಷಣಕ್ಕೆ ಪೂರಕವಾದ ಪ್ರೋತ್ಸಾಹಕರ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಲಿ ಎಂದು ಶುಭ ಹಾರೈಸಿದರು. ಸಭೆಯಲ್ಲಿ ಹಿಂದಿನ ಶೈಕ್ಷಣಿಕ ವರ್ಷದ ಕಲಿಕಾ ವಿಭಾಗ ಮತ್ತು ಹಾಜರಾತಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ನಂತರ ಸಮವಸ್ತ್ರ ಹಾಗೂ ಶೈಕ್ಷಣಿಕ ವರ್ಷದ ಪಠ್ಯಪುಸ್ತಕ ವಿತರಣೆ ಮಾಡಲಾಯಿತು. ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಶಾಲೆಯನ್ನು ಅಲಂಕರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ಶ್ರೀಮತಿ ತೇಜಾ ಅವರ ವತಿಯಿಂದ ಸಿಹಿ ತಿಂಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಹೇಮಂತ್ ಮೈತ್ತಲಿಕೆ, ಶ್ರೀಮತಿ ವಾರಿಜಾಕ್ಷಿ ಬಡ್ಡಮೆ, ಶ್ರೀಮತಿ ಉಷಾ ವತಿಯಿಂದ ಪಾಯಸದೂಟ ಏರ್ಪಡಿಸಲಾಗಿತ್ತು. ಶಾಲೆಯ ಮುಖ್ಯದ್ವಾರವನ್ನು ಮಹೇಶ ಕೇದಗೆದಡಿ ಮಾಲೀಕತ್ವದ SHREE VINAYAKA EVENTS ವತಿಯಿಂದ ಅಲಂಕರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಿರೆಬಂಡಾಡಿ ಗ್ರಾಮ ಪಂಚಾಯತ್ ಸದಸ್ಯೆ ವಾರಿಜಾಕ್ಷಿ, ಹೇಮಂತ್,ಎಸ್ಡಿಎಂಸಿ ಸಮನ್ವಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ,ಹಾಗೂ ಜಿಲ್ಲಾ ಸಕ್ರಿಯ ನಿಕಟ ಪೂರ್ವ ಅಧ್ಯಕ್ಷೆ ಪ್ರಶಸ್ತಿ ವಿಜೇತೆ ಸಲಿಕತ್ ಕೇಮ್ಮಾರ,ಶಾಲಾಭಿವೃದ್ಧಿ ಸಮಿತಿ ಅದ್ಯಕ್ಷರು, ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಮೆಹನಾಝ್ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಸುಮನ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಮೋಹನಾಂಗಿ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.