ಶಿಡ್ಲಘಟ್ಟ (ವಿಶ್ವ ಕನ್ನಡಿಗ ನ್ಯೂಸ್): ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕ್ರಾಸಿನಲ್ಲಿರುವ ಜ್ಞಾನಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮತ್ತೊಮ್ಮೆ ಸಾಧನೆಯನ್ನು ಮೆರೆದಿದ್ದಾರೆ.
ಎಸೆಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಜ್ಞಾನ ಜ್ಯೋತಿ ಶಾಲೆಯ ವಿದ್ಯಾರ್ಥಿ ಲೋಚನ್ ಗೌಡ ಟಿಎಂ ಅವರು 623 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಮೂರನೇ ರ್ಯಾಂಕ್ ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆ ತಾಲ್ಲೂಕು ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ.
2022 23 ನೇ ಸಾಲಿನಲ್ಲಿ ನಡೆದ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜ್ಞಾನಜ್ಯೋತಿ ಶಾಲೆಯ ವಿದ್ಯಾರ್ಥಿ ಟಿಎಂ ಲೋಚನ್ ಗೌಡ ಅವರು 616 ಅಂಕಗಳನ್ನು ಪಡೆದಿದ್ದರು ನಂತರ ನಡೆದ ಮರುಮೌಲ್ಯಮಾಪನದಲ್ಲಿ 623 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿಯೇ ಮೂರನೇ ರ್ಯಾಂಕ್ ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಪ್ರಥಮ ರಾಗಿದ್ದಾರೆ.
ಅದೇ ರೀತಿ ಜ್ಞಾನಜ್ಯೋತಿ ಶಾಲೆಯ ಮತ್ತೊಬ್ಬ ವಿದ್ಯಾರ್ಥಿನಿ ಕೆವಿ ಬಿಂದು ಅವರು 620 ಅಂಕಗಳನ್ನು ಪಡೆದು ರಾಜ್ಯದಲ್ಲಿ 6ನೇಯ ರ್ಯಾಂಕ್ ಪಡೆದಿದ್ದಾರೆ ಇದಕ್ಕೂ ಮೊದಲು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಕೆವಿ ಬಂದು ಅವರು 617 ಅಂಕಗಳನ್ನು ಪಡೆದಿದ್ದರು ನಂತರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿ ಇದೀಗ 620 ಅಂಕಗಳನ್ನು ಪಡೆದು ಸಾಧನೆಯನ್ನು ಮೆರೆದಿದ್ದಾರೆ ಒಟ್ಟಾರೆ ಮರುಮೌಲ್ಯಮಾಪನ ದಲ್ಲಿ ಉತ್ತಮ ಫಲಿತಾಂಶವನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಕೆ ಗುಡಿಯಪ್ಪ, ಕಾರ್ಯದರ್ಶಿ ಬಿ.ಎಂ.ರಾಜೀವ್ ಹಾಗೂ ಪ್ರಾಂಶುಪಾಲೆ ಡಾ.ಮನುಶ್ರೀ ಅಭಿನಂದನೆ ಸಲ್ಲಿಸಿದ್ದಾರೆ ವಿದ್ಯಾರ್ಥಿಗಳ ಈ ಸಾಧನೆಗೆ ಸಹಕರಿಸಿದ ಶಿಕ್ಷಕರು ಮತ್ತು ಪೋಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.