(www.vknews.in) : ಹಾಸ್ಯ ನಟರೊಬ್ಬರು ಫೇಸ್ಬುಕ್ ಲೈವ್ನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ‘ದಿ ಕಪಿಲ್ ಶರ್ಮಾ ಶೋ ಕಾರ್ಯಕ್ರಮಕ್ಕೆ ಹೆಸರಾದ ತೀರ್ಥಾನಂದ್ ರಾವ್ ಆತ್ಮಹತ್ಯೆಗೆ ಯತ್ನಿಸಿದ ಹಾಸ್ಯನಟ.
ವಿಷ ಸೇವಿಸಿ ತಮ್ಮ ಜೀವನವನ್ನು ಕೊನೆಗೊಳಿಸಲು ಪ್ರಯತ್ನಿಸಿದ ಅವರು, ತನಗೆ ಏನಾದರೂ ಸಂಭವಿಸಿದಲ್ಲಿ ತನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಹಿಳೆಯೇ ಹೊಣೆಯಾಗಬೇಕು ಎಂದು ಹೇಳಿಕೆ ನೀಡಿದ್ದಾರೆ.
ವಿಡಿಯೋವನ್ನು ಆನ್ಲೈನ್ನಲ್ಲಿ ನೋಡಿದ ಕೂಡಲೇ ತೀರ್ಥಾನಂದ್ ಸ್ನೇಹಿತರು ಮತ್ತು ಸಹೋದ್ಯೋಗಿಗಳು ತೀರ್ಥಾನಂದ್ ಅವರ ಮನೆಗೆ ಧಾವಿಸಿದ್ದಾರೆ. ಆಗ ತೀರ್ಥಾನಂದ್ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡುಕೊಂಡರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.