ಬಂಟ್ವಾಳ (www.vknews.in) : ತಾಲೂಕಿನ ಬಿ.ಮೂಡ ಗ್ರಾಮದ ಮುಗ್ದಲ್ ಗುಡ್ಡೆ ನಿವಾಸಿ ವಾಣಿಶ್ರೀ (40) ಎಂಬ ಮಹಿಳೆ ನಾಪತ್ತೆಯಾಗಿದ್ದಾರೆ. ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ಮಹಿಳೆ ನಾಪತ್ತೆಯಾಗಿದ್ದಾರೆ. ಇವರು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾರೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಳೆದ 10 ವರ್ಷದ ಹಿಂದೆ ವೇಣೂರಿನ ಯೋಗೀಶ್ ಎಂಬವರಿಗೆ ವಾಣಿಶ್ರೀ ಅವರನ್ನು ಮದುವೆ ಮಾಡಿ ಕೊಡಲಾಗಿತ್ತು. ಬಳಿಕ ಇವರು ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ಬಂಟ್ವಾಳದ ತಾಯಿ ಮನೆಯಲ್ಲಿ ವಾಸವಾಗಿದ್ದರು. ಮೇ 21ರಂದು ವಾಣಿಶ್ರೀ ಅವರು ಹಳೆಯಂಗಡಿಯ ಪರಿಚಿತ ವ್ಯಕ್ತಿ ವರುಣ್ ಎಂಬವರ ಜೊತೆ ಹೋಗಿದ್ದರು. ಆದರೆ ಮರುದಿನ ಮಂಗಳೂರಿನಿಂದ ಮಗಳನ್ನು ಕರೆದುಕೊಂಡು ಬರಲಾಗಿತ್ತು.
ಈ ಘಟನೆ ನಡೆದು ನಾಲ್ಕು ದಿನದ ಬಳಿಕ ಟೈಲರ್ ಅಂಗಡಿಗೆ ಹೋಗಿಬರುತ್ತೇನೆ ಎಂದು ಮನೆಯಲ್ಲಿ ಧರಿಸಿದ ಬಟ್ಟೆಯಲ್ಲಿ ಹೋದ ವಾಣಿಶ್ರೀ ವಾಪಾಸು ಮನೆಗೆ ಬಂದಿಲ್ಲ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಈಕೆಯ ತಾಯಿ ಸುನಂದಾ ಅವರು ದೂರು ನೀಡಿದ್ದಾರೆ. ಟೈಲರ್ ಅಂಗಡಿಯಲ್ಲಿ ವಿಚಾರಿಸಿದಾಗ ಅಲ್ಲಿಗೂ ಬರದೆ ನಾಪತ್ತೆಯಾಗಿದ್ದು ಈಕೆ ಮತ್ತೆ ಹಳೆಯಂಗಡಿಯ ವರುಣ್ ಜೊತೆಗೆ ಹೋಗಿರಬಹುದು ಎಂದು ತಾಯಿ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.