ಬೆಂಗಳೂರು (www.vknews.in) ; 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಈ ಹಿಂದೆ ರಾಜ್ಯ ಸರ್ಕಾರ ಹೇಳಿತ್ತು. ಆದರೆ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್ 18 ಕ್ಕೆ ಮುಂದೂಡಲಾಗಿದೆ.
ಜೂನ್ 18 ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಸೆಂಟರ್ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದೆ.
ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನು ಇ-ಗೌರ್ನೆನ್ಸ್ ಇಲಾಖೆ ಮಾಡಿಕೊಂಡಿದೆ. ವಿದ್ಯುತ್ ಬಿಲ್ ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ, ಖಾತೆ ಸಂಖ್ಯೆ, ಬಾಡಿಗೆ, ಭೋಗ್ಯದ ಕರಾರು ಪತ್ರ ಸಲ್ಲಿಸುವುದು. ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ, ಆಧಾರ್ ಅನ್ನು ಸಲ್ಲಿಸುವ ಮೂಲಕ ಪಡೆಯಬಹುದಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.