ತಿರುವನಂತಪುರಂ (www.vknews.in) : ಕೇರಳದ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಹಾಗೂ ಮಲಯಾಳಂ ಸಿನಿಮಾ ರಂಗದ ನಿರ್ದೇಶಕ ರಾಮಸಿಂಹನ್ ಅಕ್ಬರ್ ಬಿಜೆಪಿ ತೊರೆಯುವುದಾಗಿ ತಿಳಿಸಿದ್ದಾರೆ. ಎಲ್ಲದರಿಂದಲೂ ಮುಕ್ತಿ ಪಡೆದುಕೊಂಡು ಧರ್ಮದೊಂದಿಗೆ ಇರುತ್ತೇನೆ ಎಂದು ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಬರಹ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ.
ಮೂಲತಃ ಇಸ್ಲಾಮ್ ಧರ್ಮದವರಾಗಿದ್ದ ಅಕ್ಬರ್ 2021ರಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದರು. ನಂತರ ಆಲಿ ಅಕ್ಬರ್ ಎಂಬ ತಮ್ಮ ಮೂಲ ಹೆಸರನ್ನು ಅವರು ರಾಮಸಿಂಹನ್ ಅಕ್ಬರ್ ಎಂದು ಬದಲಾಯಿಸಿಕೊಂಡಿದ್ದರು. ಅದೇ ವರ್ಷ ಅವರನ್ನು ಬಿಜೆಪಿ ರಾಜ್ಯ ಸಮಿತಿ ಸದಸ್ಯತ್ವ ಹಾಗೂ ಜವಾಬ್ದಾರಿ ಹುದ್ದೆಗಳನ್ನು ನೀಡಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.