ಸುರತ್ಕಲ್ (www.vknews.in) : 17 ವರ್ಷದ ಯುವತಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಮಂಗಳೂರಿನ ಸುರತ್ಕಲ್ ಸಮೀಪ ನಡೆದಿದೆ. ನಾಪತ್ತೆಯಾದ ಹುಡುಗಿಯನ್ನು ಸ್ಫೂರ್ತಿ ಎಂದು ಗುರುತಿಸಲಾಗಿದೆ.
ಸಂತೋಷ್ ಹಾಗೂ ರೇಖಾ ದಂಪತಿಗಳ ಮಗಳು ಸ್ಫೂರ್ತಿ ದಿನಾಂಕ 08-06-2023ರಂದು ಮನೆಗೆ ಬಾರದೆ ಇದ್ದಾಗ ಗಾಬರಿಯಾದ ಮನೆಯವರು ಎಲ್ಲಾ ಕಡೆ ವಿಚಾರಿಸಿದರು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಯ ಚಹರೆ: 17 ವರ್ಷ ಪ್ರಾಯ, 5ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಬಿಳಿ ಬಣ್ಣದ ಟೀ ಶರ್ಟ್ ಹಾಗೂ ಕಪ್ಪಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.