ಮಂಡ್ಯ () : ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ನ್ಯಾಯಾಲಯವು 2ವರ್ಷ ಕಠಿಣ ಸಜೆ ವಿಧಿಸಿ 50 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ 2ಲಕ್ಷ ಪರಿಹಾರವನ್ನೂ ಘೋಷಿಸಿದೆ.
2018ರ ಜ.24ರಂದು ಕೆ.ಆರ್. ಪೇಟೆಯಲ್ಲಿರುವ ಅಲ್ಪಸಂಖ್ಯಾತ ಮಾದರಿ ವಸತಿ ಶಾಲೆಯ ದೈಹಿಕ ಶಿಕ್ಷಕ ರವಿ ಎಂಬಾತನ ದೌರ್ಜನ್ಯದ ಬಗ್ಗೆ ದೂರು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮೊಹಮ್ಮದ್ ಇಬ್ರಾಹಿಂ ಮತ್ತು ಜುಬೈದಾ ದಂಪತಿಯ ಪುತ್ರಿ ಎಂಟನೇ ತರಗತಿ ವಿದ್ಯಾರ್ಥಿನಿ ಝೈಬುನ್ನಿಸಾ (ಸಫ್ರೀನಾ) ಅದೇ ದಿನ ನಿಗೂಢವಾಗಿ ಮೃತಪಟ್ಟಿದ್ದರು.
ವಿದ್ಯಾರ್ಥಿನಿ ಸಾವಿಗೂ ಮುನ್ನ 4:30ರ ಸುಮಾರಿಗೆ ತನ್ನ ಸ್ನೇಹಿತೆಯ ಮೊಬೈಲ್ ಮೂಲಕ ತನ್ನ ತಾಯಿಯನ್ನು ಸಂಪರ್ಕಿಸಿ ದೌರ್ಜನ್ಯ ಎಸಗಿದ ಶಿಕ್ಷಕ ರವಿ ವಿರುದ್ಧ ದೂರು ನೀಡಿದ್ದಳು. ಗಣರಾಜ್ಯೋತ್ಸವ ಪರೇಡ್ ನ ಪೂರ್ವಾಭ್ಯಾಸದ ವೇಳೆ ಝೈಬುನ್ನಿಸಾ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದು ಆರೋಪಿಸಿ ರವಿ ಇತರ ವಿದ್ಯಾರ್ಥಿಗಳ ಮುಂದೆ ಝೈಬುನ್ನಿಸ್ಸಾ ಅವರನ್ನು ಅವಮಾನಿಸಿ, ನಿಂದಿಸಿ, ಥಳಿಸಿದ್ದನು. ತನ್ನ ತಾಯಿಯೊಂದಿಗಿನ ತನ್ನ ಕೊನೆಯ ಮೊಬೈಲ್ ಸಂಭಾಷಣೆಯಲ್ಲಿ ಹೇಳಿದ್ದರು.
ಸಂಜೆ 5:30 ರ ಸುಮಾರಿಗೆ ಝೈಬುನ್ನಿಸಾ ತನ್ನ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಸೀಲಿಂಗ್ ಫ್ಯಾನ್ ನಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಗಮನಿಸಿದ ಆಕೆಯ ಸ್ನೇಹಿತರು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದು, ರವಿ ಮತ್ತು ಇತರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜೈಬುನ್ನಿಸಾಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ವೈದ್ಯರು ವಿದ್ಯಾರ್ಥಿನಿ ಸಾವನ್ನಪ್ಪಿರುವುದಾಗಿ ಘೋಷಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.