ಕಾರ್ಕಳ (www.vknews.in) : ಉಡುಪಿ ಜಿಲ್ಲೆಯ ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟು, ಗಂಭೀರ ಗಾಯಗೊಂಡಿದ್ದ ಸಹಸವಾರೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಸಶಾಂಕ್ (21) ಹಾಗು ನಿರ್ಮಿತ(19) ಮೃತಪಟ್ಟವರು.
ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್ನಲ್ಲಿ ಭಾನುವಾರ ಬೆಳಗ್ಗೆ ಹೊರಟಿದ್ದರು. ಶಶಾಂಕ್ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದು ಬಂದಿದೆ. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.