ಪುತ್ತೂರು (www.vknews.in) : ಸಂಪ್ಯ ಸಮೀಪದ ಕಲ್ಲರ್ಪೆ ಎಂಬಲ್ಲಿ ಮುಂಜಾನೆ ಏಳು ಗಂಟೆ ಸುಮಾರಿಗೆ ಕಾರು ಹಾಗು ಸ್ಕೂಟರ್ ಮಧ್ಯೆ ಉಂಟಾದ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ನೈತಾಡಿ ನಿವಾಸಿಯಾಗಿರುವ ಉಸ್ಮಾನ್ ಎಂಬವರು ಮೃತಪಟ್ಟ ವ್ಯಕ್ತಿ.
ಅಪಘಾತದಲ್ಲಿ ಉಸ್ಮಾನ್ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಅವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸ್ಕೂಟರ್ ನುಜ್ಜುಗುಜ್ಜಾಗಿದೆ. ಇವರು ಪುತ್ತೂರಿನ ಎ.ಪಿ.ಎಂ.ಸಿ.ಯಲ್ಲಿ ಅಡಿಕೆ ವ್ಯಾಪಾರಸ್ತರಾದ ಅಬ್ದುಲ್ ರಶೀದ್ ಹಾಜಿಯವರ ಅಣ್ಣ. ಮೃತರು ಪತ್ನಿ, ನಾಲ್ಕು ಮಕ್ಕಳು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.