ಉತ್ತರ ಕನ್ನಡ (www.vknews.in) : ಕಾರವಾರದ ಆಸ್ಪತ್ರೆಯೊಂದರ ನಿರ್ಲಕ್ಷಕ್ಕೆ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೂಲತ ಕೊಪ್ಪಳದ ಸ್ವಪ್ನ ರಾಯ್ಕರ್(32) ಮೃತಪಟ್ಟ ಮಹಿಳೆ. ಅವರು ಕುಟುಂಬದ ಜೊತೆ ಗೋವಾ ಹಾಗೂ ಉತ್ತರ ಕನ್ನಡ ಪ್ರವಾಸಕ್ಕಾಗಿ ಆಗಮಿಸಿದ್ದರು.
ಗೋವಾದ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ನಂತರ ಅವರು ತಂದೆ ಪ್ಯಾರಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಕಾರವಾರ ತಾಲೂಕಿನ ಹಳಗಾ ಗ್ರಾಮದ ಸೆಂಟ್ ಮೇರಿಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಪ್ಯಾರಲಿಸಿಸ್ ಬರದಂತೆ ಮುಂಚೆಯೇ ಚುಚ್ಚುಮದ್ದು ತೆಗೆದುಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದರು ಎನ್ನಲಾಗಿದೆ. ಬಳಿಕ ಮಹಿಳೆ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮೃತರ ಫೋಷಕರು ಆರೋಪಿಸಿದ್ದಾರೆ.
ಮಹಿಳೆ ಕುಸಿದು ಬೀಳುತ್ತಿದ್ದಂತೆ ತಕ್ಷಣ ಆಸ್ಪತ್ರೆಯವರೇ ಕಾರವಾರದ ಜಿಲ್ಲಾ ಆಸ್ಪತ್ರೆಗೆ ಮಹಿಳೆಯನ್ನ ರವಾನೆ ಮಾಡಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲೇ ಮಹಿಳೆ ಮೃತಪಟ್ಟಿದ್ದು, ವೈದ್ಯರು ಇವರು ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಇನ್ನು ಸೆಂಟ್ ಮೇರಿಸ್ ಆಸ್ಪತ್ರೆಯಲ್ಲಿ ಹಲವು ವರ್ಷದಿಂದ ಪ್ಯಾರಲಿಸಿಸ್ಗೆ ಚುಚ್ಚುಮದ್ದು ಕೊಡುತ್ತಿದ್ದು, ಈ ಆಸ್ಪತ್ರೆ ಮೇಲೆ ಹಿಂದಿನಿಂದಲೂ ಆರೋಪವಿರುವುದು ಕೇಳಿಬಂದಿತ್ತು. ಈ ಆಸ್ಪತ್ರೆಯಲ್ಲಿ ಯಾವ ಇಂಜೆಕ್ಷನ್, ಯಾವ ಔಷದಿ ಕೊಡುತ್ತಾರೆ ಎಂದು ತಿಳಿಸುವುದಿಲ್ಲ. ಇದು ಸರಿಯಾದ ಕ್ರಮವಲ್ಲ ಎಂದು ಹಲವರು ವಿರೋಧಿಸಿದ್ದರು.
ಈ ಕುರಿತು ಮಾತನಾಡಿದ ಕ್ರೀಮ್ಸ್ ಆಸ್ಪತ್ರೆ ವೈದ್ಯರಾದ ಡಾ. ರೋಷನ್ ‘ ಮೃತ ಸ್ವಪ್ನ ರಾಯ್ಕರ್ ಎಂಬುವವರನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಜೀವವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಸಾವಿಗೆ ನಿಖರವಾದ ಕಾರಣ ಶವ ಪರೀಕ್ಷೆಯ ರೀಪೋರ್ಟ್ ಜೊತೆಗೆ ಪೊಲೀಸರ ತನಿಖೆ ಬಳಿಕ ಗೊತ್ತಾಗಲಿದೆ ಎಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.