ಮಂಜೇಶ್ವರ(ವಿಶ್ವಕನ್ನಡಿಗ ನ್ಯೂಸ್): ಶಾಲಾ ಕಾಲೇಜುಗಳನ್ನು ಕೇಂದ್ರೀಕರಿಸಿ ತಂಬಾಕು ಉತ್ಪನ್ನಗಳ ಹಾಗೂ ಮಾದಕವಸ್ತುಗಳ ಮಾರಾಟ ವ್ಯಾಪಕವಾಗುತ್ತಿದೆ. ಶಾಲೆಗೆ ಹೋಗುವ ಚಿಕ್ಕ ಮಕ್ಕಳು ಕೂಡಾ ಈ ತರದ ನಿಷೇಧಿತ ಪಾನ್ ಮಸಾಲ , ತಂಬಾಕು ಹಾಗೂ ಮಾದಕ ವಸ್ತುಗಳಿಗೆ ದಾಸರಾಗುತ್ತಿರುವುದು ಕಂಡು ಬರುತ್ತಿದೆ.
ಭವಿಷ್ಯದ ತಲೆಮಾರುಗಳನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವುದರೊಂದಿಗೆ ದಿನಂಪ್ರತಿ ವಿದ್ಯರ್ಥಿಗಳೂ ಸೇರಿ ಯುವ ಜನತೆ ಮಾದಕ ದ್ರವ್ಯಗಳಿಗೆ ದಾಸರಾಗುವುದು ಹೆಚ್ಚುತ್ತಿರುವುದನ್ನು ನೋಡುತ್ತಿದ್ದೇವೆ. ಬೆಳೆಯುತ್ತಿರುವ ಹೊಸ ತಲೆಮಾರನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವುದರ ಹಿಂದೆ ಇರುವವರನ್ನು ಹುಡುಕಿ ಪೋಲೀಸ್ ಅಧಿಕಾರಿಗಳು ಸ್ವಯಂ ಕೇಸ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಜೇಶ್ವರ ಮಂಡಲ ಸಮಿತಿ ಕೋಶಾಧಿಕಾರಿ ತಾಜುದ್ದೀನ್ ಉಪ್ಪಳ ಗೇಟ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.