ಬೆಂಗಳೂರು (www.vknews.in) : ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ. ಕೊರೋನಾ ಸಮಯದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಮಗು, ಇದೀಗ ತಾಯಿಯನ್ನೂ ಕಳೆದುಕೊಂಡು ಅನಾಥವಾಗಿದೆ.
2018ರಲ್ಲಿ ಕಾನ್ಸ್ಟೇಬಲ್ ಪ್ರಿಯಾಂಕಾ ಅವರಿಗೆ ಮದುವೆಯಾಗಿತ್ತು. ಆದರೆ 2021ರಲ್ಲಿ ಕೊರೋನಾ ಸಂದರ್ಭದಲ್ಲಿ ಇವರ ಪತಿ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಪ್ರಿಯಾಂಕಾ 1 ತಿಂಗಳ ಗರ್ಭಿಣಿಯಾಗಿದ್ದರು. ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಿಯಾಂಕಾ, 10 ದಿನ ರಜೆ ಪಡೆದು ಅಜ್ಜಂಪುರಕ್ಕೆ ತೆರಳಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.