ಉತ್ತರ ಪ್ರದೇಶ (www.vknews.in) : ಸೌಹಾರ್ದ ಕ್ರಿಕೆಟ್ ಪಂದ್ಯ ಕೊಲೆಯಲ್ಲಿ ಅಂತ್ಯವಾಗಿದೆ, ಬ್ಯಾಟಿಂಗ್ ವೇಳೆ ಔಟಾದ ಕೋಪದಲ್ಲಿ ಯುವಕ ಬೌಲರ್ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಸಹೋದರನ ಸಹಾಯದಿಂದ ಆರೋಪಿ ಪರಾರಿಯಾಗಿದ್ದಾನೆ.
ನಿನ್ನೆ ಸಂಜೆ ಕಾನ್ಪುರದಲ್ಲಿ ಈ ಘಟನೆ ನಡೆದಿದೆ. ಸ್ಪಿನ್ ಬೌಲಿಂಗ್ ನಲ್ಲಿ ಸಚಿನ್ ಎಂಬ ಯುವಕನನ್ನು ಹರಗೋವಿಂದ್ ಎಂಬ ಯುವಕ ಔಟ್ ಮಾಡಿದ್ದಾನೆ. ಘಟನೆ ಬಳಿಕ ಸಹೋದರನ ಸಹಾಯದಿಂದ ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
ಸಚಿನ್ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದ ಕುಟುಂಬಸ್ಥರು ಮತ್ತು ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದರೂ ಅವರು ಸಾವನ್ನಪ್ಪಿದ್ದಾರೆ. ಈ ವೇಳೆ ಆಟದ ಮೈದಾನದಲ್ಲಿದ್ದ ಮಕ್ಕಳಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.