ಅರಂತೋಡು (www.vknews.in) : ಕಾಂಗ್ರೆಸ್ ಮುಖಂಡ ಎಸ್. ಸಂಶುದ್ದೀನ್ ಅವರ ಅರಂಬೂರು ಮನೆಯಲ್ಲಿ ಕೆಲವು ತಿಂಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಫಯಾಜ್ನನ್ನು ಸಕಲೇಶಪುರ ಹಾಗೂ ಪ್ರಸನ್ನ ನನ್ನು ಬೆಂಗಳೂರಿನ ಗೋವಿಂದ ನಗರದಿಂದ ಬಂಧಿಸಲಾಗಿದೆ. ಅವರನ್ನು ಸುಳ್ಯಕ್ಕೆ ಕರೆತಂದು ದರೋಡೆಗೆ ಒಳಗಾಗಿದ್ದ ಮನೆ ಮತ್ತು ಪರಿಸರದ ಮಹಜರು ನಡೆಸಿದ್ದು ಬಳಿಕ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳ ಮೇಲೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಕಡೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಕಳ್ಳರಿಗೆ ಆ ದಿನ ಸಂಶುದ್ದೀನ್ ಅವರ ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶ ಇರಲಿಲ್ಲವೆಂದು ವಿಚಾರಣೆ ವೇಳೆ ಗೊತ್ತಾಗಿದೆ. ಕಾಸರಗೋಡಿನಲ್ಲಿರುವ ಸಹಚರನನ್ನು ಭೇಟಿಯಾಗಲು ಘಟನೆ ನಡೆದ ದಿನ ಆರೋಪಿಗಳು ಕಾರಿನಲ್ಲಿ ಸುಳ್ಯ ಮೂಲಕ ಹೋಗುತ್ತಿದ್ದಾಗ ಅರಂಬೂರಿನಲ್ಲಿರುವ ಸಂಶುದ್ದೀನ್ ಅವರ ಮನೆಯ ಮುಂಭಾಗದ ಗೇಟಿನಲ್ಲಿ ನ್ಯೂಸ್ ಪೇಪರ್ ಇಟ್ಟಿದ್ದನ್ನು ಗಮನಿಸಿದ ಕಳ್ಳರು ಮನೆಯಲ್ಲಿ ಯಾರು ಇರಲಾರರು ಎಂದು ದೃಢಪಡಿಸಿಕೊಂಡು ದರೋಡೆಗೆ ಮುಂದಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.