ಬೆಂಗಳೂರು (www.vknews.in) : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿಗೆ ಶಿಕ್ಷಕಿ ಮತ್ತು ಆಕೆಯ ಪುತ್ರನೇ ಕಾರಣ ಎಂದು ಆರೋಪಿಸಿ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಹೊಸಕೋಟೆ ನಗರದ ಪಾರ್ವತಿಪುರ ನಿವಾಸಿ ಸಾರಾ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಇವರು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗಳು ಆತ್ಮಹತ್ಯೆ ಮಾಡಿಕೊಂಡ ಒಂದು ವಾರದ ನಂತರ ಬಾಲಕಿಯ ಪೋಷಕರು ಶಿಕ್ಷಕಿ ವಿರುದ್ಧ ಹೊಸಕೋಟೆ ಪೊಲೀಸರಿಗೆ ದೂರು ನೀಡಿದ್ದು, ಮಗಳ ಸಾವಿಗೆ ಶಿಕ್ಷಕಿ ಮತ್ತು ಆಕೆಯ ಪುತ್ರನೇ ಕಾರಣ ಎಂದು ಆರೋಪಿಸಿದ್ದಾರೆ.
ಟೀಚರ್ ಪುತ್ರ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ. ಬಾಲಕಿ ಆತ್ಮಹತ್ಯೆ ಬಳಿಕ ತಮ್ಮ ಪುತ್ರನ ವಿಚಾರ ಎಲ್ಲೂ ಹೇಳಬಾರದು ಎಂದು ಶಿಕ್ಷಕಿ ಶಾಲಾ ಮಕ್ಕಳಿಗೆ ತಾಕೀತು ಮಾಡಿದ್ದರು ಎಂದೂ ಪೋಷಕರು ಆರೋಪಿಸಿದ್ದಾರೆ. ಸಾರಾ ಆತ್ಮಹತ್ಯೆ ಮಾಡಿಕೊಂಡ ಕೆಲವು ದಿನಗಳ ಬಳಿಕ ಸಹಪಾಠಿಗಳು ಆಕೆಯ ಪೋಷಕರಿಗೆ ಈ ವಿಷಯವನ್ನೆಲ್ಲ ತಿಳಿಸಿದ್ದರಿಂದ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.