ನವದೆಹಲಿ(ವಿಶ್ವಕನ್ನಡಿಗ ನ್ಯೂಸ್): ಹತ್ರಾಸ್ ಯುಎಪಿಎ ಪ್ರಕರಣದಲ್ಲಿ ರೌಫ್ ಷರೀಫ್ ಮತ್ತು ಮಸೂದ್ ಅಹ್ಮದ್ ಅವರಿಗೆ ಜಾಮೀನು ಸಿಕ್ಕಿದೆ. ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರವೂಫ್ ಜೊತೆಗೆ ಡ್ಯಾನಿಶ್ ಕೂಡ ಜಾಮೀನು ಪಡೆದಿದ್ದಾರೆ. ಇದರೊಂದಿಗೆ ಸಿದ್ದಿಕ್ ಕಪ್ಪನ್ ಒಳಗೊಂಡ ಯುಎಪಿಎ ಪ್ರಕರಣದ ಎಲ್ಲ ಆರೋಪಿಗಳಿಗೂ ಜಾಮೀನು ಸಿಕ್ಕಿದೆ.
ಕಪ್ಪುಹಣ ವ್ಯವಹಾರದ ಆರೋಪದ ಮೇಲೆ 2020 ರಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ರೌಫ್ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನು ನೀಡಿದ್ದರೂ, ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಹಣ ಪಾವತಿಸಿದ ಮತ್ತೊಂದು ಪ್ರಕರಣವೂ ಅವರ ವಿರುದ್ಧ ದಾಖಲಾಗಿತ್ತು.
ಆದರೆ ಜಾಮಿಯಾ ಮಿಲಿಯಾದ ಪಿಜಿ ವಿದ್ಯಾರ್ಥಿ ಮಸೂದ್ ಅಹ್ಮದ್, ಯುಪಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯ ಕುಟುಂಬವನ್ನು ಭೇಟಿಯಾಗಲು ಹೋಗುತ್ತಿದ್ದಾಗ ಬಂಧಿಸಲಾಯಿತು. ಟ್ಯಾಕ್ಸಿ ಚಾಲಕ ಮೊಹಮ್ಮದ್ ಆಲಂ ಮತ್ತು ಕಪ್ಪನ್ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.