ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕರಾವಳಿಯಾದ್ಯಂತ ವ್ಯಾಪಕವಾಗಿ ಮಳೆ ಬರುತ್ತಿದ್ದು, ಮಂಗಳೂರಿನ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರದಲ್ಲಿ ಇವತ್ತು ಮುಂಜಾನೆ ನಡೆದ ಭೂಕುಸಿತ ದುರಂತದಲ್ಲಿ ಝರೀನಾ ಎಂಬ ಮಹಿಳೆಯು ನಿಧನ ಹೊಂದಿದ್ದು ಹಾಗೂ ಅವರ ಪತಿ ಹಾಗೂ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ದುರ್ಘಟನೆಗೆ ಕರ್ನಾಟಕ ರಾಜ್ಯ ಔಖಾಫ್ ಮಂಡಳಿ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಬೆಂಗಳೂರು ಸಂತಾಪ ಸೂಚಿಸಿದ್ದು, ಮಹಿಳೆಗೆ ಪರಿಹಾರ ಹಾಗೂ ಆಸ್ಪತ್ರೆಯ ಚಿಕಿತ್ಸೆಯ ವೆಚ್ಚ ಸಹಾಯ ನೀಡುವಂತೆ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯರವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.