ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸುನ್ನೀ ಮಾನೇಜ್ ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ಬೆಳ್ಳಾರೆ ಝೋನಲ್ ಜುಲೈ ಇಪ್ಪತ್ತಮೂರು ಆದಿತ್ಯವಾರ ದಂದು ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್ ಸುಳ್ಯ ದಲ್ಲಿ ಆಯೋಜಿಸುವ ‘ಸಂಸ್ಕೃತಿಯ ಉಳಿವಿಗಾಗಿ’ ಎಂಬ ಧ್ಯೇಯ ದೊಂದಿಗೆ ಮದ್ರಸ ವಿದ್ಯಾರ್ಥಿಗಳ ಬೃಹತ್ ವಿದ್ಯಾರ್ಥಿ ಸಂಗಮ ಇದರ ಪ್ರಚಾರದ ಅಂಗವಾಗಿ ಪೋಸ್ಟರ್ ಪ್ರದರ್ಶನ ನಡೆಸಲಾಯಿತು.
ಈ ಸಂದರ್ಭ ಸುನ್ನೀ ಜಂಇಯ್ಯತ್ತುಲ್ ಮುಅಲ್ಲಿಮೀನ್ ಎಸ್ ಜೆ ಎಂ ಈಸ್ಟ್ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಪುಂಡೂರು,ಎಸ್ ಜೆ ಎಂ ಸುಳ್ಯ ರೇಂಜ್ ಪ್ರಧಾನ ಕಾರ್ಯದರ್ಶಿ ನಿಝಾರ್ ಸಖಾಫಿ ಮುಡೂರು, ಎಸ್ ಎಂ ಎ ಸುಳ್ಯ ರೀಜ್ಯನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ,ಅಧ್ಯಾಪಕರುಗಳಾದ ಅಬ್ದುಲ್ ಖಾದರ್ ಮುಸ್ಲಿಯಾರ್ ಎಡಪ್ಪಲಂ, ಹುಸೈನಾರ್ ಮದನಿ ಕುಂಜಿಲ,ಅಬ್ದುಲ್ ಖಾದರ್ ಮದನಿ ಅಜ್ಜಾವರ,ಮುಹಮ್ಮದ್ ಹನೀಫ್ ಸಖಾಫಿ ಬೆಳ್ಳಾರೆ,ಅಬ್ದುರ್ರಹ್ಮಾನ್ ಸಅದಿ ಕರ್ನೂರು,ಅಬೂಬಕ್ಕರ್ ಸಖಾಫಿ ಅಯ್ಯಂಗೇರಿ, ಸಿರಾಜ್ ಸಅದಿ ಅಲೆಕ್ಕಾಡಿ ,ಇರ್ಫಾನ್ ಸಅದಿ ಜೋಗಿಬೆಟ್ಟು ಹಾಗೂ ರವೂಫ್ ಝುಹ್ರಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.