ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಕೋಲಾರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪದ್ಮ ಬಸವಂತಪ್ಪ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು .
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ಅವರು , ಜಿಲ್ಲೆಯ ಗ್ರಾಮೀಣಾಭಿವೃದ್ಧಿಗೆ ಸರ್ಕಾರಿ ನೌಕರರು ಸ್ಪಂದನೆ ನೀಡಿ , ಜಿಲ್ಲೆಯನ್ನು ಮಾದರಿಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋನ ಎಂದರು . ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಅತಿ ಮುಖ್ಯವಾಗಿದ್ದು , ಜಿಲ್ಲೆಯ ಸರ್ಕಾರಿ ನೌಕರರು ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳ ಪ್ರಗತಿಗೆ ಕೈಜೋಡಿಸಬೇಕು ಎಂದರು .
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮಾತನಾಡಿ , ಜಿಲ್ಲೆಯ ಸರ್ಕಾರಿ ನೌಕರರು ಕರ್ತವ್ಯ ಬದ್ಧತೆಯಲ್ಲಿ ರಾಜ್ಯದಲ್ಲೇ ಹೆಸರಾ ಗಿದ್ದು , ನಿಮ್ಮ ಅಭಿವೃದ್ಧಿಪರ ಚಿಂತನೆಗೆ ಸದಾ ನಿಮ್ಮ ಸೂಚನೆಗಳನ್ನು ಪಾಲಿಸಿ ಸಹಕರಿಸುವ ಭರವಸೆ ನೀಡಿ , ನೌಕರರ ಸಮಸ್ಯೆಗಳ ಪರಿಹಾರಕ್ಕೂ ಸಹಕಾರ ಕೋರಿದರು .
ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ , ಗೌರವಾಧ್ಯಕ್ಷ ರವಿಚಂದ್ರ , ನಿಕಟಪೂರ್ವ ಅಧ್ಯಕ್ಷರಾದ ಕೆ.ಎನ್.ಮಂಜುನಾಥ್ , ಕೆ.ಬಿ.ಅಶೋಕ್ , ನ್ಯಾಯಾಂಗ ಇಲಾಖೆಯ ನಾಗರಾಜ್ ಮತ್ತಿತರರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.