(www.vknews.in,) ಹನೂರು: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮವಾಸ್ಯೆ ವಿಶೇಷವಾಗಿ ಸಹಸ್ರಾರರು ಭಕ್ತಸಾಗರ ಹರಿದು ಬಂದಿದ್ದು ಮಾದಪ್ಪನಿಗೆ ಪೂಜೆ ಸಲ್ಲಿಸಿದ್ದಾರೆ.
ದೇಗುಲದಲ್ಲಿ ಸಂಜೆ 6:30 ರಿಂದ 8:30 ರವರೆಗೆ ಸಾಲೂರು ಬೃಹನ್ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರು ಮಾರಪ್ಪನಿಗೆ ವಿವಿಧ ಅಭಿಷೇಕ ನೆರವೇರಿಸಿದರು.
ಭಾನುವಾರ ಮತ್ತು ಸೋಮವಾರ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷವಾಗಿ ಮಾದಪ್ಪನಿಗೆ ಬೆಳಗ್ಗೆಯಿಂದ ವಿವಿಧ ಪೂಜಾ ಕೈಗಳು ಜರಗಿತು. ಬೆಳಗಿನ ಜಾವದಿಂದಲೂ ಸರತಿ ಸಾಲಿನಲ್ಲಿ ತೆರಳಿದ ಭಕ್ತರು ಅರಕೆ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು. ಅಮಾವಸೆ ವಿಶೇಷವಾಗಿ ಸಹಸ್ರಾರು ಭಕ್ತಸಾಗರ ಹರಿದು ಬಂದಿದ್ದು. ಇದರಲ್ಲಿ ಪುರುಷರು ಮಕ್ಕಳೆನ್ನದೆ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ವಿಶೇಷವಾಗಿದೆ. ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿರುವುದರಿಂದ. ಇದರ ಸದುಪಯೋಗಕ್ಕೆ ಮುಂದಾದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ತಾಲೂಕು ಸೇರಿದಂತೆ ಜಿಲ್ಲೆಯ ವಿದೆಡೆಗಳಿಂದ ಮಹಿಳೆಯರೇ ಹೆಚ್ಚಾಗಿ ಮಾದಪ್ಪನ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.
ಮಾದಪ್ಪನ ಸನ್ನಿಧಿಯಲ್ಲಿ ಬೆಳಗಿನ ಜಾವ ಸ್ವಾಮಿಗೆ ಅಭಿಷೇಕ ಬಿಲ್ಪವಚ೯ನೆ ಸೇವೆ ಜರುಗುವ ಭೀಮನ ಅಮಾವಾಸ್ಯೆಯ ವಿಶೇಷ ಪೂಜೆ ಕೈಂಕರ್ಯಗಳಲ್ಲಿ ಭಕ್ತರು ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ಮುಡಿಸೇವೆ, ಉರುಳು ಸೇವೆ, ಪೆಂಜಿನ ಸೇವೆಯನ್ನು ಸಲ್ಲಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ವಿವಿಧ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ಮಾದಪ್ಪನ ದೇವಾಲಯ :ವಿವಿಧ ಪುಷ್ಪಗಳು, ವಿವಿಧ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳ ತೋರಣ ಕಟ್ಟಿ ದೇವಲಯ ಒಳಗೆ ನೋಡುಗರ ಕಣ್ಣು ಸೆಳೆಯುವಂತಿತ್ತು.
ಬಿಡು ಬಿಟ್ಟಿರುವ ಭಕ್ತರು : ಅಮಾವಾಸ್ಯೆ ಅಂಗವಾಗಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮನೆ ಮಾದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದ್ದಾರೆ. ಹುಲಿವಾಹನ,ರುದ್ರಾಕ್ಷಿ ವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನ ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಇನ್ನಿತರ ವಸ್ತುಗಳನ್ನ ಎಸೆದು ದೇವರ ಕೃಪೆಗೆ ಪಾತ್ರರಾದರು. ಈ ವೇಳೆ ಉಘೇ ಮಾದಪ್ಪ, ಉಘೇ ಮಾದಪ್ಪ… ಘೋಷಣೆ ಕೂಗಿ ಭಕ್ತಿ ಭಾವ ಮೆರೆದರು.
ಹೆಚ್ಚುವರಿ ಬಸ್ ವ್ಯವಸ್ಥೆ : ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಕೈಂಕರ್ಯಗಳು ಜರಗುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು ಕರ್ನಾಟಕ ಸಾರಿಗೆ ನಿಗಮ ಬಸ್ಸುಗಳನ್ನು ಹೆಚ್ಚುವರಿ ಸಂಖ್ಯೆಯಲ್ಲಿ ಬಿಡಬೇಕು ಎಂಬುದು ಸಾರ್ವಜನಿಕ ಭಕ್ತಾದಿಗಳ ಮಾನವೀಯಗಿತ್ತು.
ಇದೇ ವೇಳೆ ಭೀಮನ ಅಮವಾಸ್ಯೆ ಪ್ರಯುಕ್ತ ಕ.ರಾ.ರ.ಸಾ.ನಿಗಮ, ಚಾಮರಾಜನಗರ ವಿಭಾಗದ ವತಿಯಿಂದ ಶ್ರೀ ಮ. ಮಹದೇಶ್ವರ ಬೆಟ್ಟಕ್ಕೆ ಮೂರು ದಿನಗಳ ಜಾತ್ರಾ ಕಾಯ೯ಚರಣೆಯನ್ನು ಈ ದಿನ ಪ್ರಾರಂಭಿಸಿದ್ದು, ವಿವಿಧ ಡಿಪೋ ವಿಭಾಗಗಳಿಂದ ( ಸಿ.ಜೆ.ಆರ್, ಎಂ.ವೈ. ಎಸ್, ಎಂ.ಡಿ.ವೈ, ಆರ್.ಎಂ.ಎನ್, ಬಿ.ಸಿ.ಡಿ, ಎಚ್.ಎಸ್.ಎನ್ ) ಒಟ್ಟು 300 ಹೆಚ್ಚುವರಿ ವಾಹನಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಮುಖ್ಯ ಸ್ಥಳಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳನ್ಬು ನಿಯೋಜಿಸಿ ಮಾನಿಟರ್ ಮಾಡಲಾಗುತ್ತಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಸಾರಿಗೆ ಅಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.