ಜೈಪುರ(ವಿಶ್ವಕನ್ನಡಿಗ ನ್ಯೂಸ್): ಮಹಿಳೆಯರ ಸುರಕ್ಷತೆಯನ್ನು ಟೀಕಿಸಿದ ಸಚಿವರನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಜಾ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಪ್ರತಿಕ್ರಿಯಿಸಿದ್ದ ಸಚಿವ ರಾಜೇಂದ್ರ ಸಿಂಗ್ ಗೂಢಾ ಅವರನ್ನು ವಜಾಗೊಳಿಸಲಾಗಿದೆ. ಸೈನಿಕ ಕಲ್ಯಾಣ್ (ಸ್ವತಂತ್ರ ಪ್ರಭಾರ), ಗೃಹರಕ್ಷಕ ದಳ, ನಾಗರಿಕ ರಕ್ಷಣೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳನ್ನು ನಿಭಾಯಿಸುತ್ತಿದ್ದ ಸಚಿವ ರಾಜೇಂದ್ರ ಸಿಂಗ್ ಗೂಢಕ್ ಅವರು ಹುದ್ದೆ ತೊರೆದಿದ್ದಾರೆ.
ಮಣಿಪುರ ಸಂಘರ್ಷದ ಸಂದರ್ಭದಲ್ಲಿ ಸದನದಲ್ಲಿ ಮಾತನಾಡುವಾಗ ರಾಜೇಂದ್ರ ಸಿಂಗ್ ಟೀಕೆ ಮಾಡಿದ್ದಾರೆ. ”ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ, ಮಣಿಪುರದ ಬಗ್ಗೆ ಚರ್ಚಿಸುವ ಬದಲು ನಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಮೊದಲು ನೋಡಬೇಕು, ರಾಜಸ್ಥಾನದಲ್ಲಿ ಮಹಿಳೆಯರಿಗೆ ಭದ್ರತೆ ನೀಡುವಲ್ಲಿ ವಿಫಲರಾಗಿದ್ದೇವೆ, ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ, ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಈ ರೀತಿ ಸಚಿವರು ಮಾತನಾಡಿದ್ದರು.
ಈ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಮುಖ್ಯಮಂತ್ರಿಗಳು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರಿಗೆ ಪತ್ರ ಬರೆದು ರಾಜೇಂದ್ರ ಸಿಂಗ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಸ್ತಾವನೆ ಸ್ವೀಕರಿಸಿ ಸಚಿವರನ್ನು ವಜಾಗೊಳಿಸಲಾಗಿದೆ ಎಂದು ರಾಜಭವನ ಪ್ರಕಟಿಸಿದೆ. ಮಣಿಪುರದಲ್ಲಿ ಮಹಿಳೆಯರನ್ನು ಬಟ್ಟೆ ಬಿಚ್ಚಿದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದಾಗ ಸ್ವತಃ ಸಚಿವರೇ ರಾಜಸ್ಥಾನದಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.