ಗಿರಿಧಿ(ವಿಶ್ವಕನ್ನಡಿಗ ನ್ಯೂಸ್): ವಿವಾಹೇತರ ಸಂಬಂಧವನ್ನು ಹೊಂದಿದ್ದ ಆರೋಪದಲ್ಲಿ 25ರ ಹರೆಯದ ದಲಿತ ಮಹಿಳೆಯೋರ್ವಳನ್ನು ಥಳಿಸಿ,ವಿವಸ್ತ್ರಗೊಳಿಸಿ ಬುಧವಾರ ರಾತ್ರಿಯಿಡೀ ದುಷ್ಕರ್ಮಿಗಳು ಕಾಡಿನಲ್ಲಿ ಮರವೊಂದಕ್ಕೆ ಕಟ್ಟಿ ಹಾಕಿದ ಘಟನೆ ಜಾರ್ಖಂಡ್ನ ಗಿರಿಧಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಿಗ್ಗೆ ಏಳು ಗಂಟೆಯ ಸುಮಾರಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಅರೆನಗ್ನ ಸ್ಥಿತಿಯಲ್ಲಿ ಮರಕ್ಕೆ ಕಟ್ಟಿ ಹಾಕಲಾಗಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.