ದೆಹಲಿ(ವಿಶ್ವಕನ್ನಡಿಗ ನ್ಯೂಸ್): ತ್ರಿವಳಿ ತಲಾಖ್ಗೆ ನಿಷೇಧ ಹೇರರಿದ ತಮ್ಮ ಸರ್ಕಾರದ ನಿರ್ಧಾರಕ್ಕೆ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚು ಭದ್ರತೆಯ ಭಾವನೆ ಮೂಡಿದ್ದು, ರಕ್ಷಾ ಬಂಧನದ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರನ್ನು ಬೇಟಿ ಮಾಡಿ ರಕ್ಷಾ ಬಂಧನ ಕಟ್ಟಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸದರನ್ನು ಕೇಳಿಕೊಂಡಿದ್ದಾರೆ.
ಸೋಮವಾರ ರಾತ್ರಿ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ನ ಎನ್ಡಿಎ ಸಂಸದರ ಸಭೆಯಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವರದಿಯಾಗಿದೆ, ಇದು 338 ಎನ್ಡಿಎ ಸಂಸದರೊಂದಿಗೆ ಪ್ರಧಾನಿ ನಡೆಸಲಿರುವ ಸಭೆಗಳ ಸರಣಿಯ ಭಾಗವಾಗಿದೆ.
2024 ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಮೈತ್ರಿಕೂಟದೊಳಗೆ ಹುಮ್ಮಸ್ಸು ಹೆಚ್ಚಿಸುವ ಉದ್ದೇಶದಿಂದ ಸಭೆಗಳನ್ನು ನಡೆಸಲಾಗುತ್ತಿದೆ, ಈಗ 38 ಪಕ್ಷಗಳಿಗೆ ವಿಸ್ತರಿಸಲಾಗಿದೆ.
“ಸಮಾಜದ ಎಲ್ಲಾ ವರ್ಗಗಳೊಂದಿಗೆ ಸಂಪರ್ಕ ಸಾಧಿಸುವ ಅವಶ್ಯಕತೆಯಿದೆ ಎಂದು ಪ್ರಧಾನಿ ಮೋದಿ ಹೇಳಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.