ಮಕ್ಕಾ (www.vknews.in) : ಪವಿತ್ರ ಉಮ್ರಾ ನಿರ್ವಹಣೆಯಲ್ಲಿರುವ ಆಗಸ್ಟ್ ತಿಂಗಳ ಗಲ್ಫ್ ಟೂರ್ಸ್ ಉಮ್ರಾ ಯಾತ್ರಾರ್ಥಿಗಳ ತಂಡವು ಆಗಸ್ ಹದಿನೈದರ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಉಮ್ರಾ ನಿರ್ವಹಿಸಿ, ದೇಶದ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ನಡೆಸಿತು.
ಯಾತ್ರಾ ತಂಡದ ಚೀಫ್ ಅಮೀರ್ ಉಸ್ತಾದ್ ಸಿರಾಜುದ್ದೀನ್ ಫೈಝಿ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು.ದೇಶದ ಸ್ವಾತಂತ್ರ್ಯದ ಹೋರಾಟವು ಸರ್ವಧರ್ಮೀಯರ ಒಗ್ಗಟ್ಟಿನ ಸೌಹಾರ್ದತೆಯ ಹೋರಾಟವಾಗಿದ್ದು,ಸ್ವತಂತ್ರ ದೇಶವು ಮುಂದೆ ಸಾಗಲು ಅದೇ ಸೌಹಾರ್ದತೆಯು ಅಗತ್ಯವಾಗಿದೆ ಎಂದರು. ವಿಶೇಷ ಪ್ರಾರ್ಥನೆಗೆ ನೇತೃತ್ವ ನೀಡಿದ ಉಸ್ತಾದರು ದೇಶದ ಕ್ಷೇಮಕ್ಕಾಗಿಯೂ ಗಲಭೆಪೀಡಿತ ಪ್ರದೇಶಗಳಲ್ಲಿ ಶಾಂತಿ ಮರುಸ್ಥಾಪನೆ ಗೊಳ್ಳಲಿಕ್ಕಾಗಿಯೂ ಪ್ರಾರ್ಥಿಸಿದರು.
ಟೂರ್ಸ್ ಮಾಲಕರಾದ ಸುಲೈಮಾನ್ ಹಾಜಿ, ಇಸ್ಮಾಯಿಲ್ ಹಾಜಿ ಸೌತ್ ಇಂಡಿಯಾ, ಉಸ್ತಾದರುಗಳಾದ ಅಬ್ಬಾಸ್ ದಾರಿಮಿ ಕೆಲಿಂಜ, ಅಬ್ದುರ್ರಹ್ಮಾನ್ ಫೈಝಿ ಫಲಿಮಾರ್,ಖಾಲಿದ್ ಸಅದಿ ಬೇಂಗಿಲ,ಸೈದಾಲಿ ಮುಸ್ಲಿಯಾರ್, ಹಲವಾರು ಮೊಹಲ್ಲಾಗಳಿಂದ ಯಾತ್ರಾರ್ಥಿಗಳಾಗಿ ಬಂದ ಜಮಾಅತ್ ಸಮಿತಿ ಸಾರಥಿ ಗಳು, ವಿವಿಧ ಸಂಘ ಸಂಸ್ಥೆಗಳ ಯುವ ಕಾರ್ಯಕರ್ತರು ಸೇರಿದಂತೆ ಎರಡು ಯಾತ್ರಾ ತಂಡಗಳಲ್ಲಿದ್ದ ಸುಮಾರು ತೊಂಭತ್ತರಷ್ಟು ಯಾತ್ರಾರ್ಥಿಗಳು ಪಾಲ್ಗೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.