ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ನುಸ್ರತುಲ್ ಇಸ್ಲಾಮ್ ಎಸೋಸಿಯೇಶನ್ ರಿ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವವು ಜರಗಿತು.
ಸ್ಥಳೀಯ ಮುದರ್ರಿಸ್ ಅನಸ್ ಮರ್ಝೂಕಿ ಯವರು ಯವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ವೀರರನ್ನು ಸ್ಮರಿಸಿರಿ ಅವರಿಗಾಗಿ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಿದರು.
ರಾಷ್ಟ್ರ ಧ್ವಜಕ್ಕೆ ಗೌರವ ವಂದನೆಯನ್ನು ಸಲ್ಲಿಸಿ ಎಲ್ಲರೂ ರಾಷ್ಟ್ರಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಸದರ್ ಉಸ್ತಾದ್ ಫೈಝಲ್ ಸಖಾಫಿ. ಜಮಾಅತ್ ಕಾರ್ಯದರ್ಶಿ ಹೈದರ್ ಹಾಜಿ. ಜೀರ್ಮುಕ್ಕಿ ಮಸೀದಿ ಕಾರ್ಯದರ್ಶಿ ಹನೀಫ್ ಜೀರ್ಮುಕ್ಕಿ ನುಸ್ರತ್ ಉಪಾಧ್ಯಕ್ಷರಾದ ಜಿ ಎಸ್ ಅಬ್ದುಲ್ಲ. ಕೋಶಾಧಿಕಾರಿ ಅಬ್ದುಲ್ ಖಾದರ್ ಕಾರ್ಯದರ್ಶಿ ಅಶ್ರಫ್ ದಿನಸಿಬಜಾರ್ .ಹಾಗೂ ಸಮಿತಿ ಸದಸ್ಯರು ಹಯಾತುಲ್ ಇಸ್ಲಾಂ ದರ್ಸ್ ವಿಧ್ಯಾರ್ಥಿಗಳು ಹಾಗೂ ನೂರುಲ್ ಹುದಾ ಮದ್ರಸದ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು .
ಪ್ರಧಾನ ಕಾರ್ಯದರ್ಶಿ ಸೂಫಿ ಎಲಿಮಲೆ ಸ್ವಾಗತಿಸಿ ವಂದಿಸಿದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.