ಬೆಂಗಳೂರು (www.vknews.in) : 72 ವರ್ಷದ ವೃದ್ಧ ಮದುವೆ ಆಗೋದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು 63 ವರ್ಷದ ವೃದ್ಧೆ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದಯಾಮಣಿ (63) ಎಂಬ ವೃದ್ಧೆ ಲೋಕನಾಥ್ (72) ಎಂಬ ವೃದ್ಧನ ವಿರುದ್ಧ ಬೆಂಗಳೂರಿನ ಪೂರ್ವ ವಿಭಾಗ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಹಲಸೂರು ನಿವಾಸಿಯಾದ ದಯಾಮಣಿಗೆ ಮದುವೆ ಆಗಿ ಗಂಡ ಮರಣ ಹೊಂದಿದ್ದರು. ಲೋಕನಾಥ್ ಪತ್ನಿ ಕೂಡ ಮರಣ ಹೊಂದಿದ್ದು, ಮಗನಿಗೆ ಮದುವೆ ಮಾಡಿಸುವ ಸಲುವಾಗಿ ಹೆಣ್ಣು ನೋಡುತ್ತಿದ್ದರು. ಈ ವೇಳೆ ದಯಾಮಣಿ ಹೆಣ್ಣು ತೋರಿಸುವುದಾಗಿ ಲೋಕನಾಥ್ಗೆ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿ ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ.
ಇದೇ ಖುಷಿಯಲ್ಲಿ ಇಬ್ಬರೂ ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಟ್ರಿಪ್ ಕೂಡ ಹೋಗಿದ್ದರು. ಆದರೆ ಇತ್ತೀಚಿಗೆ ಲೋಕನಾಥ್, ದಯಾಮಣಿಯನ್ನು ದೂರ ಮಾಡಲು ಶುರು ಮಾಡಿದ್ದರು. ಇದರಿಂದ ನೊಂದ ದಯಾಮಣಿ ಲೋಕನಾಥ್ಗೆ ಫೋನ್ ಮಾಡಿ ಕೇಳಿದ ವೇಳೆ ಮದುವೆ ಆಗೋಕೆ ಆಗಲ್ಲ. ಅದೇನ್ ಮಾಡ್ಕೋತಿಯಾ ಮಾಡ್ಕೋ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಇದರಿಂದ ಬೇಸತ್ತ ದಯಾಮಣಿ ನನಗೆ ನ್ಯಾಯ ಕೊಡಿಸಿ ಎಂದು ಠಾಣೆಯಲ್ಲಿ ದೂರು ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.