ವಿಜಯನಗರ (www.vknews.in) : ವಿಜಯನಗರ ಜಿಲ್ಲೆಯ ಹೊಸಕೋಟೆ ಪೊಲೀಸರು ಹಲವಾರು ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆಯೇ ಬಂಧಿತ ಮಹಿಳೆ.
ಹೊಸಕೋಟೆ ತಾಲೂಕಿನಲ್ಲಿ ಯುವಕರನ್ನು ವಂಚಿಸಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಈಕೆಯ ಮೇಲೆ ಹೊಸಕೋಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ತಬಸ್ಸುಮ್ ಮೇಲೆ ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಇದೆ. ಈ ಹಿನ್ನೆಲೆಯಲ್ಲಿ ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.