ಮಂಗಳೂರು (www.vknews.in) : ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಮೊದಲು ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ, ಸೋಮವಾರ ಸರ್ವರ್ ದೋಷದಿಂದಾಗಿ ಹಲವರು ತೊಂದರೆ ಅನುಭವಿಸಿದ ಕಾರಣ, ಸಾರ್ವಜನಿಕರು ಇನ್ನಷ್ಟು ಕಾಲಾವಕಾಶ ನೀಡುವಂತೆ ಆಗ್ರಹಿಸಿದ್ದರು.
ಇದನ್ನು ಪರಿಗಣಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23ರವರೆಗೂ ಕಾಲಾವಕಾಶ ನೀಡಲಾಗಿತ್ತು. ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.