ಮಂಗಳೂರು (www.vknews.in) : ಬೆಳ್ತಂಗಡಿಯಲ್ಲಿ ಶ್ರೀಗಂಧದ ಮರ ಕಡಿದ ಪ್ರಕರಣದಲ್ಲಿ 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾಸರಗೋಡು ಮಂಜೇಶ್ವರಂ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ವೊರ್ಕಾಡಿಯ ಎಸ್.ಎ.ಅಶ್ರಫ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
27 ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಬೆಲೆಬಾಳುವ ಶ್ರೀಗಂಧದ ಮರ ಕಡಿದ ಪ್ರಕರಣದಲ್ಲಿ ಅಶ್ರಫ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಹೊರಬಂದ ಅಶ್ರಫ್ ಕಳೆದ 27 ವರ್ಷಗಳಿಂದ ಮುಂಬೈ ಮತ್ತು ಸೌದಿ ಅರೇಬಿಯಾದಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ದಿನ ಅಶ್ರಫ್ ಮನೆಗೆ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಅಶ್ರಫ್ ರನ್ನು ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಎಎಸ್ ಐ ಧನರಾಜ್ ಟಿ.ಎಂ., ಹೆಡ್ ಕಾನ್ ಸ್ಟೇಬಲ್ ಗಳಾದ ಬೆಣ್ಣಿಚ್ಚನ್, ಗಂಗಾಧರ್ ಮತ್ತು ಅಶೋಕ್ ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ಎರಡು ವಾರಗಳ ರಿಮಾಂಡ್ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.