ಯುಎಈ(ವಿಶ್ವಕನ್ನಡಿಗ ನ್ಯೂಸ್): ಸುನ್ನೀ ಸ್ಟೂಡೆಂಟ್ ಫೆಡರೇಶನ್ SSF ಇದರ ಗೋಲ್ಡನ್ ಫಿಫ್ಟಿ ಇದರ ಭಾಗವಾಗಿ ಬೆಂಗಳೂರಿನಲ್ಲಿ ನಡೆಯಲಿರುವ SSF ಸ್ವರ್ಣ ಮಹೋತ್ಸವ ಮಹಾ ಸಮ್ಮೇಳನದ ಯಶಸ್ವಿಗೆ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯು ಕರೆ ನೀಡಿದೆ.
ಶೈಖುನಾ ಮಾಣಿ ಉಸ್ತಾದರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಅತಿಥಿಯಾಗಿ ಆಗಮಿಸಲಿರುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ರವರು ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.
ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಜಿ ಪರಮೇಶ್ವರ್, ಸೈಯಿದ್ ಖಲೀಲ್ ಅಲ್ ಬುಖಾರಿ, ಡಾ: ಹಕೀಂ ಅಝ್ಹರಿ ಹಾಗೂ ರಾಷ್ಟ್ರದ ವಿವಿಧ ಕಡೆಗಳಿಂದ ಆಗಮಿಸಲಿರುವ ಉಲಮಾ ಉಮರಾ ನೇತಾರರು, ರಾಜಕೀಯ ನಾಯಕರು ಹಲವಾರು ಗಣ್ಯ ವೆಕ್ತಿಗಳು ಭಾಗವಹಿಸಲಿರುವ ಮಹಾ ಸಮ್ಮೇಳನದ ಯಶಸ್ವಿಗೆ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯು ಕರೆ ನೀಡಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.