ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) : ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಸಿಗುವ ಎಲ್ಲಾ ಆರೋಗ್ಯ ಸೇವೆಗಳನ್ನು ಕಟ್ಟ ಕಡೆಯ ವ್ಯಕ್ತಿಯವರೆಗೂ ತಲುಪಿಸುವಲ್ಲಿ ಆಶಾ ಕಾರ್ಯಕರ್ತರು ಯಶಸ್ವಿಯಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ . ಜಗದೀಶ್ ಅವರು ಹೇಳಿದರು.
ಜಿಲ್ಲಾಡಳಿತ , ಜಿಲ್ಲಾ ಪಂಚಾಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಎನ್ ಹೆಚ್ ಎಂ , ಸಭಾಂಗಣದಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
ಆಯುಷ್ಮಾನ್ ಭವ 3.0 ಅನುಷ್ಠಾನ ಸಂಬಂಧ , ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಅಭಿಯಾನದಲ್ಲಿ ಭಾಗಿಯಾಗಿ ಆಯುಷ್ಮಾನ್ ಆರೋಗ್ಯ ಯೋಜನೆಯ ಉಪಯುಕ್ತತೆ ಕುರಿತಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಮನೆಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಗ್ರಾಮ ಪಂಚಾಯಿತಿ , ಸ್ಥಳೀಯ ಸಂಸ್ಥೆಗಳು , ಸದಸ್ಯರು ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಆಯುಷ್ಮಾನ್ ಕಾರ್ಡ್ ಮಾಡಿಸದೆ ಇರುವಂತಹ ಸಾರ್ವಜನಿಕರಿಗೆ ಆಯುಷ್ಮಾನ್ ಕಾರ್ಡ್ ನ ಮಹತ್ವದ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಹೆಚ್ಚಿನ ಜನರು ಆಯುಷ್ಮಾನ್ ಆರೋಗ್ಯ ಕಾರ್ಡ್ ಪಡೆದುಕೊಳ್ಳುವಂತೆ ಕ್ರಮವಹಿಸಿ ಎಂದರು.
ಆಯುಷ್ಮಾನ್ ಭವ ಕಾರ್ಯಕ್ರಮದಲ್ಲಿ ಬರುವ ಪ್ರಯೋಜನಗಳು ತಾಯಿ ಆರೋಗ್ಯ , ಗರ್ಭಿಣಿ ಹಾಗೂ ಬಾಣಂತಿ ಸೇವೆಗಳು , ನವಜಾತ ಶಿಶು ಆರೈಕೆ ಹಾಗೂ ಚುಚ್ಚುಮದ್ದು ಸೇವೆಗಳು , ಮಕ್ಕಳ ಹಾಗೂ ಹದಿಹರೆಯದವರಿಗೆ ನೀಡುವ ಆರೋಗ್ಯ ಸೇವೆಗಳು , ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ , ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ.
ಸಾಂಕ್ರಾಮಿಕ ರೋಗಗಳ ನಿರ್ವಹಣೆ , ಅಸಾಂಕ್ರಾಮಿಕ ರೋಗಗಳ ನಿರ್ವಹಣೆ , ಹಿರಿಯ ನಾಗರೀಕರ ಸೇವೆಗಳು ಹಾಗೂ ಉಪಶಮನ ಆರೈಕೆ , ಕಣ್ಣಿನ ಆರೋಗ್ಯ ಸೇವೆಗಳು , ದಂತ ಆರೋಗ್ಯ ಸೇವೆಗಳು , ತುರ್ತು ವೈದ್ಯಕೀಯ ಸೇವೆಗಳನ್ನು ನೀಡುವುದು . ಮಾನಸಿಕ ಆರೋಗ್ಯ ಸೇವೆಗಳು , ಹಾಗೂ ಎಲ್ಲಾ ಆರೋಗ್ಯ ಸೇವೆಗಳು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರಿಗೂ ಸೇವೆಗಳು ತಲುಪುವಲ್ಲಿ ಯಶಸ್ವಿಯಾಗಬೇಕು.
ಆರ್ಸಿಎಚ್ ಅಧಿಕಾರಿ ಡಾ ವಿಜಯ್ ಕುಮಾರಿ ಅವರು ಮಾತನಾಡಿ ಜಿಲ್ಲೆಯಲ್ಲಿ ಎಲ್ಲಾ ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ತಾಯಿ ಮತ್ತು ಮಗುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಹಾಗೂ ಶಿಬಿರ ಪ್ರಾಥಮಿಕ ಆರೋಗ್ಯ ಕೇಂದ್ರ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಶನಿವಾರ ವಿಷಯ ಆಧಾರಿತ ಶಿಬಿರಗಳನ್ನು ನಡೆಸಿ ಆರೋಗ್ಯ ಪತ್ತೆ ಮಾಡಿ ಚಿಕಿತ್ಸೆ ಪಡೆಯಲು ಕ್ರಮ ವಹಿಸುವುದು ಸಾಂಕ್ರಾಮಿಕವಾಗಿ ಹರಡದೆ ಇರುವ ರೋಗಗಳು ಮಧುಮೇಹ ರಕ್ತದ ಒತ್ತಡ ಇತ್ಯಾದಿ ಗರ್ಭಿಣಿಯರು ಮತ್ತು ಪೌಷ್ಟಿಕ ಆಹಾರ , ಅನಿಮೀಯ ಮುಕ್ತ ಭಾರತ ಮಾಡೋಣ ಹಾಗೂ ಇಂದ್ರಧನುಷ್ ಲಸಿಕೆ ಅಭಿಯಾನ ಇನ್ನು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಈ ಎಲ್ಲಾ ಸೇವೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಹೇಳಿದರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಚಾರಿಣಿ , ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಎಂ ಸಿ ನಾರಾಯಣಸ್ವಾಮಿ , ಡಾ , ಪ್ರಸನ್ನ ಕುಮಾರ್ , ತಾಲೂಕು ಆರೋಗ್ಯ ಅಧಿಕಾರಿ ಕೆ ವಿ ನಾರಾಯಣಸ್ವಾಮಿ , ಕ್ಷೇತ್ರ ಶಿಕ್ಷಣಾಧಿಕಾರಿ ಪ್ರೇಮ . ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.