() : ತೋಡಾರು ಶಂಸುಲ್ ಉಲಮಾ ಅರಬಿಕ್ ಕಾಲೇಜಿನ ಸಂತತಿ ಬಪ್ಪಳಿಗೆ ನೂರುಲ್ ಹುದಾ ಮದ್ರಸದ ಹಳೆ ವಿದ್ಯಾರ್ಥಿ ಪಟ್ಟಿಕ್ಕಾಡ್ ಜಾಮಿಆಃ ನೂರಿಯದಲ್ಲಿ 2022 ನೇ ಸಾಲಿನ ಫಿಕ್ಹ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಫೈಝಿ ಅಲ್ ಮಅಬರಿ ಪದವಿ ಪಡೆದ ಮುಹಮ್ಮದ್ ಶಫೀಕ್ ರನ್ನು ಬಪ್ಪಳಿಗೆಯಲ್ಲಿ ನಡೆದ ಮೀಲಾದ್ ಸಮಾರಂಭದಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು.
ಸ್ಥಳೀಯ ಸಾಮಾಜಿಕ ಸೇವಾ ಸಂಘಟನೆಯಾದ BGF ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್ ಈ ಸನ್ಮಾನವನ್ನು ಜಮಾಅತರ ಪರವಾಗಿ, ಮಸೀದಿ ವಠಾರದಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿತ್ತು. ಶಾಲು ಹೊದಿಸಿ,ಐದು ಸಾವಿರ ರೂಪಾಯಿಯನ್ನೊಳಗೊಂಡ ನಗದು, ಸನ್ಮಾನ ಫಲಕ ಹಾಗೂ ಅಮೂಲ್ಯ ಗ್ರಂಥಗಳನ್ನು ನೀಡಿ ಯುವ ವಿದ್ವಾಂಸನನ್ನು ಸಂಘಟಕರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಜಮಾಅತ್ ಸಮಿತಿ ಪದಾಧಿಕಾರಿಗಳು, ಅನ್ಸಾರುಲ್ ಇಸ್ಲಾಂ ಯುವಕ ಸಮಿತಿ ಕಾರ್ಯಕರ್ತರು, ಬಪ್ಪಳಿಗೆ ಈದ್ ಮಿಲಾದ್ ಸಮಿತಿಯ ಸಾರಥಿಗಳು, ಮಸೀದಿ ಮದ್ರಸದ ಉಸ್ತಾದರು ಹಾಗೂ ಜಮಾಅತ್ ಬಾಂಧವರು ಉಪಸ್ಥಿತರಿದ್ದರು.
ಹಿರಿಯ ವಿದ್ವಾಂಸರಾಗಿದ್ದ ಮರ್ಹೂಂ ಅಬ್ದುಲ್ ಖಾದಿರ್ ಫೈಝಿ ಬಪ್ಪಳಿಗೆ ಹಾಗೂ ಝೈನಬ ದಂಪತಿಗಳ ಗಂಡು ಮಕ್ಕಳಲ್ಲಿ ಕಿರಿಯವರೇ ಮುಹಮ್ಮದ್ ಶಫೀಕ್. ಮಕ್ಕಳಿಗೆ ಬೇಕಾದ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳೆರಡನ್ನೂ ನೀಡಿ ಜೀವನದ ಉತ್ತಮ ದಾರಿಯನ್ನು ಕಂಡುಕೊಳ್ಳುವಲ್ಲಿ ಮಕ್ಕಳಿಗೆ ಸರಿಯಾದ ದಾರಿ ತೋರುವಲ್ಲಿ ಮರ್ಹೂಂ ಅಬ್ದುಲ್ ಖಾದರ್ ಫೈಝಿ ಉಸ್ತಾದರು ಯಶಸ್ವಿಯಾಗಿದ್ದಾರೆ.ಗಂಡು ಮಕ್ಕಳ ಪೈಕಿ ಮೂರು ಮಂದಿ ವಿದೇಶ ಉದ್ಯೋಗದಲ್ಲಿದ್ದು ಕಿರಿಯ ಮಗನಾದ ಶಫೀಕ್ ನನ್ನು ಓರ್ವ ಧಾರ್ಮಿಕ ವಿದ್ವಾಂಸ(ಆಲಿಂ)ನನ್ನಾಗಿ ಮಾಡಬೇಕೆಂದು ನನ್ನ ಆಸೆ ಎಂದು ಬಪ್ಪಳಿಗೆ ಮದ್ರಸದ ಒಂದನೇ ತರಗತಿಗೆ ದಾಖಲು ಮಾಡುವಾಗ ಹೇಳಿದ್ದರು.
ಮದ್ರಸದ ಒಂದನೇ ತರಗತಿಯಲ್ಲಿ ಆತೂರು ಕುದ್ಲೂರಿನ ನಝೀರ್ ಮದನಿ ಉಸ್ತಾದರು ಅಧ್ಯಾಪಕರಾಗಿದ್ದು, ಒಂದನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ತ್ರಪ್ತಿ ದಾಯಕ ಅಂಕಗಳು ಶಫೀಕ್ ಪಡೆದಿಲ್ಲ ಎಂಬ ಮಾಹಿತಿಯನ್ನು ಅವರು ಅಂದು ಮದ್ರಸಾ ಮುಖ್ಯೋಪಾಧ್ಯಾಯರಾಗಿದ್ದ ನನ್ನ ಗಮನಕ್ಕೆ ತಂದಾಗ ಮರ್ಹೂಂ ಫೈಝಿ ಉಸ್ತಾದರಿಗೆ ಈ ಮಾಹಿತಿಯನ್ನು ನಾನು ತಿಳಿಸಿ,ಇನ್ನೊಂದು ವರ್ಷ ಒಂದನೇ ತರಗತಿಯಲ್ಲೇ ಕಲಿಯುವುದಾದರೆ ಮುಂದಿನ ಭವಿಷ್ಯ ಒಳ್ಳೆಯ ದಾಗಲಿದೆ ಎಂದಾಗ ,ಅವನ ಹಿತಕ್ಕಾಗಿ ನೀವು ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ನಾನು ಬದ್ಧ ಎಂದರು.
ಅಲ್ಲಿಂದ ಮತ್ತೆ ಪ್ರಾರಂಭವಾಯಿತು,ಶಫೀಕನ ಕಲಿಕೆಯ ಛಲ.ಮುಂದಿನ ಎಲ್ಲಾ ತರಗತಿಗಳಲ್ಲೂ ಪ್ರಥಮನಾಗಿ,ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿಯೇ ಉನ್ನತ ಸಾಧನೆಗೈದು, ಉತ್ತಮ ನಡವಳಿಕೆಯ ವಿದ್ಯಾರ್ಥಿ ಯಾಗಿ ಗುರುಹಿರಿಯರ ಸಂಪೂರ್ಣ ತೃಪ್ತಿ ಗಳಿಸಿದ್ದ. ಹತ್ತನೇ ತರಗತಿಯ ಬಳಿಕ ತಂದೆಯ ಅಭಿಲಾಷೆಯಂತೆ ಜಾಮಿಆಃ ನೂರಿಯಾದ ಸಂತತಿಯಾಗಿ ,ಧರ್ಮ ಪ್ರಬೋಧನೆಯ ಕುಡಿಯಾಗಬೇಕೆಂದು ಪ್ರತಿಷ್ಠಿತ ತೋಡಾರು ಶಂಸುಲ್ ಉಲಮಾ ಅರಬಿಕ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆದ.(ವಿದ್ಯಾರ್ಥಿಯಾಗಿದ್ದ ಈ ಮಗನೇ ತಂದೆಯ ಜನಾಝ ನಮಾಝಿಗೆ ನೇತ್ರತ್ವವನ್ನು ನೀಡಿದ್ದರು.)ಕಾಲೇಜಿನ ಅಧ್ಯಯನ ವರ್ಷಗಳನ್ನು ಪ್ರತಿಭಾನ್ವಿತನಾಗಿ ಪೂರೈಸಿ, ಜಾಮಿಆಃ ನೂರಿಯಾದಲ್ಲಿ ಸೇರಿ, ಅಧ್ಯಯನಕ್ಕೆ ಫಿಖ್ಹ್ ವಿಭಾಗವನ್ನು ಆಯ್ಕೆ ಮಾಡಿ,ಅಂತಿಮ ಪರೀಕ್ಷೆಯಲ್ಲಿ ಘಟಾನುಘಟಿ ವಿದ್ಯಾರ್ಥಿ ಗಳೆಡೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮಹ್ಬರಿ ಫೈಝಿ ಪಟ್ಟ ಅಲಂಕರಿಸಿ ಬಪ್ಪಳಿಗೆಗೆ ಕೀರ್ತಿ ತಂದ ಶಫೀಕ ರನ್ನು ಅಭಿನಂದಿಸಿ ಈ ಸನ್ಮಾನವನ್ನು ನೀಡಲಾಯಿತು.
ಪ್ರಸ್ತುತ ಶಫೀಕ್ ಫೈಝಿಯವರು ಕಿನ್ಯದ ವಾದೀ ತೈಬ ಅಕಾಡೆಮಿಯಲ್ಲಿ ಮುದರ್ರಿಸರಾಗಿ ಸೇವೆ ಸಲ್ಲಿಸುತ್ತಿದ್ದು,ಮುಂದಿನ ಜೀವನ ಇನ್ನಷ್ಟು ಬೆಳಗಿ ಅವರ ವಿದ್ವತ್ ಸಂಪತ್ತು ಸಮುದಾಯಕ್ಕೆ ಬೆಳಕಾಗಲಿ…ಆಮೀನ್
✒️ ಫೈಝೀ ಬಪ್ಪಳಿಗೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.