ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ):ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಮತ್ತು ಎನ್. ಎಸ್.ಎಸ್ ಘಟಕದ ವತಿಯಿಂದ ಆಯೋಜಿಸಲಾದ ರಕ್ತದಾನ ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಹಾಗೂ ಕುಂದಾಪುರ ರಕ್ತನಿಧಿ ಕೇಂದ್ರದ ಸಭಾಪತಿ ಎಸ್ ಜಯಕರ್ ಶೆಟ್ಟಿ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಅನಂತ್ ಶೆಟ್ಟಿ, ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಗುರು ಪ್ರಸಾದ್ ರಾವ್, ಯುವ ರೆಡ್ಕ್ರಾಸ್ ಸಂಯೋಜಕರಾದ ಪ್ರೊ.ಚೇತನಾ ಸುನೀಲ್ ಮತ್ತು ಪ್ರೊ. ಆಶ್ವಿನಿ ಹಾಗೂ ಎನ್.ಎಸ್.ಎಸ್ ಸಂಯೋಜಕಿ ಪ್ರೊ. ರೆನಿಟಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 80 ಜನರು ರಕ್ತದಾನ ಮಾಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.