ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ):ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 68 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು. ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಿದ ಸ್ಥಬ್ದಚಿತ್ರಗಳಲ್ಲಿ ಕರ್ನಾಟಕ ರಾಜ್ಯದ ಅರಣ್ಯ ಇಲಾಖೆ ಪ್ರಥಮ ಸ್ಥಾನ, ಕೃಷಿ ಇಲಾಖೆ ದ್ವಿತೀಯ ಸ್ಥಾನ ಪಡೆದಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ ಕಾಲೇಜು ವಿದ್ಯಾರ್ಥಿಗಳ ತಂಡದಲ್ಲಿ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ, ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಎರಡನೇ ಸ್ಥಾನ ಮತ್ತು ಉಡುಪಿಯ ಸರಕಾರಿ ಪ್ರೌಢಶಾಲೆ (ಬೋರ್ಡ್ ಹೈಸ್ಕೂಲ್) ತೃತೀಯ ಸ್ಥಾನ ಪಡೆದಿದೆ. ಪಥ ಸಂಚಲನದಲ್ಲಿ ವಿವಿಧ ಇಲಾಖೆಯ ಹಾಗೂ ಶಾಲಾ-ಕಾಲೇಜುಗಳ 14 ತುಕಡಿಗಳು ಭಾಗವಹಿಸಿದ್ದು, ಕಾಲೇಜು ವಿಭಾಗದ ಎನ್.ಸಿ.ಸಿ ನೋವೆಲ್ ವಿಭಾಗದ ಪೂರ್ಣಪ್ರಜ್ಞ ಕಾಲೇಜು ಮೊದಲನೇ ಸ್ಥಾನ, ಎನ್.ಸಿ.ಸಿ ನೋವೆಲ್ ವಿಭಾಗದ ಎಂ ಜಿಎಂ ಕಾಲೇಜು ಎರಡನೇ ಸ್ಥಾನ, ಎನ್.ಸಿ.ಸಿ ಆರ್ಮಿ ವಿಭಾಗದ ಪೂರ್ಣಪ್ರಜ್ಞ ಕಾಲೇಜು ಮೂರನೇ ಸ್ಥಾನ ಪಡೆದಿದೆ. ಪ್ರಾಥಮಿಕ ಹೈಸ್ಕೂಲ್ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಂತೆಕಟ್ಟೆ ಕಳತ್ತೂರು ಪ್ರಥಮ ಸ್ಥಾನ, ಸರಕಾರಿ ಪ್ರೌಢಶಾಲೆ ಆವರ್ಸೆ ಎರಡನೇ ಸ್ಥಾನ, ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಉಡುಪಿ ಮೂರನೇ ಸ್ಥಾನ ಪಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಒಳಕಾಡು ಮೊದಲನೇ ಸ್ಥಾನ, ನಾರಾಯಣ ಗುರು ಆಂಗ್ಲಮಾಧ್ಯಮ ಶಾಲೆ ಎರಡನೇ ಸ್ಥಾನ ತಮ್ಮದಾಗಿಸಿಕೊಂಡಿದೆ. ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 29 ಮಂದಿಗೆ ಹಾಗೂ 5 ಸಂಘ-ಸ೦ಸ್ಥೆಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆಗೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.