ಮಂಗಳೂರು (www.vknews.in) : ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೆ ಒಳಪಟ್ಟು ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯ ಗ್ರಾಮದಲ್ಲಿ ನಡೆದಿದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ 17, ಬಿಹಾರದಲ್ಲಿ ರಾಷ್ಟ್ರಮಟ್ಟದ ರನ್ನಿಂಗ್ ರೇಸ್ನಲ್ಲಿ ಸ್ಪರ್ಧಿಯಾಗಿದ್ದಳು. ಎನ್ನಲಾಗಿದೆ ಎರಡು ವಾರದ ಹಿಂದೆ ನಡೆದ ರಾಷ್ಟ್ರೀಯ ಕ್ರೀಡಾಕೂಟ .
ರನ್ನಿಂಗ್ ರೇಸ್ನಲ್ಲಿ ಬಹುಮಾನ ಸಿಗದಿರುದಕ್ಕೆ ಬೇಸರಗೊಂಡಿದ್ದ ನಿಶಾ ಬೇಸರದಿಂದಲೇ ತನ್ನೂರಿಗೆ ಬಂದಿದ್ದಳು. ಸೋಲಿನ ಪೆಟ್ಟು ಅರಗಿಸಿಕೊಳ್ಳಲು ಆಗದ ವಿಧ್ಯಾರ್ಥಿನಿ ನಿಶಾ ಖಿನ್ನತೆಗೆ ಒಳಗಾಗಿದ್ದಳು. ಇದರಿಂದ ಮನನೊಂದು ವಾರದ ಹಿಂದೆ ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದಳು. ತೀವ್ರ ಅಸ್ವಸ್ಥಳಾಗಿದ್ದ ನಿಶಾಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಶಾ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.