ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ):ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರದ ಮುಹೂರ್ತ ಸರಳವಾಗಿ ಕುಂದಾಪುರ ತಾಲೂಕಿನ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯಿತು.ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದ್ದ ‘ಕಾಂತಾರ’ ಸಿನಿಮಾದ ಭಾಗ 1 ಕೂಡಾ 2021 ರಲ್ಲಿ ಇದೇ ಆನೆಗುಡ್ಡೆ ಸನ್ನಿಧಾನದಲ್ಲಿ ನಡೆದಿತ್ತು. ಕನ್ನಡ ಚಿತ್ರರಂಗಕ್ಕೆ ಹೊಸ ಇಮೇಜ್ ಕೊಟ್ಟ ಸಿನಿಮಾ ‘ಕಾಂತಾರ’. ಈ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ನಟನಾಗಿ, ನಿರ್ದೇಶಕನಾಗಿ ಸಿಕ್ಕಾಪಟ್ಟೆ ಸೌಂಡ್ ಮಾಡಿದ್ದರು. ಐದೂ ಭಾಷೆಗಳಲ್ಲಿ ಭಾಷಾಂತರ ಗೊಂಡು ಸಿನಿಮಾ ಪುನರ್ ರಿಲೀಸ್ ಗೊಂಡು ಭರ್ಜರಿಯಾಗಿ ಕಲೆಕ್ಷನ್ನಲ್ಲಿ ದಾಖಲೆ ಬರೆದಿತ್ತು.ಈಗಾಗಲೇ ಬಿಡುಗಡೆಯಾಗಿ ಜನಪ್ರೀಯ ಗೊಂಡ ಕಾಂತಾರ ಸಿನಿಮಾದ ಅಧ್ಯಾಯ 2 ಆಗಿದ್ದು ಮುಂದೆ ಚಿತ್ರೀಕರಣ ಕೊಂಡು ಬಿಡುಗಡೆ ಗೊಳ್ಳುವ ಕಾಂತಾರವು ಮೊದಲ ಅಧ್ಯಾಯ (ಚಾಪ್ಟರ್ 1) ಆಗಿರುತ್ತದೆ ಎನ್ನುತ್ತಾರೆ ನಿರ್ದೇಶಕರು.ಹೀಗಾಗಿ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆದಿದ್ದು,ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಿ.ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿತ್ತು.ಇನ್ನು ಸಿನಿಮಾದ ಮುಹೂರ್ತದ ದಿನದಂದೇ ಚಿತ್ರದ ಫಸ್ಟ್ ಲುಕ್ ಟೀಸರ್ ,ಹಾಗೂ ಪೋಸ್ಟರ್ ನ್ನು ಹೊಂಬಾಳೆ ಫಿಲ್ಮ್ಸ್ ರಿಲೀಸ್ ಮಾಡಿದೆ.ಎಂದಿನಂತೆ ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರಲಿದ್ದು ಕನ್ನಡ,ತೆಲುಗು,ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ ಹಾಗೂ ಇಂಗ್ಲಿಷ್ ಸೇರಿ ಒಟ್ಟು ಏಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.