(www.vknews.in) : ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ ಹಾಗು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಎಂಬಾತನ ವಿರುದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪುತ್ತೂರು ನಗರ ಹಾಗೂ ಉಪ್ಪಿನಂಗಡಿ ಪೋಲೀಸ್ ಠಾಣೆಗೆ ದೂರನ್ನು ನೀಡಲಾಯಿತು.
ಪುತ್ತೂರು ಠಾಣೆಗೆ WIM ಪುತ್ತೂರು ವಿಧಾನಸಭಾ ಅಧ್ಯಕ್ಷೆಯಾದ ಝಾಹಿದ ಸಾಗರ್ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಕಾರ್ಯದರ್ಶಿ ಸೌಧ ಮಠ ರವರು ದೂರು ನೀಡಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.