ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಫವತಿ ವಾರಸು ಖಾತೆ ಬದಲಾವಣೆ ಆಂದೋಲನ ನಡೆಸಲು ಎಲ್ಲಾ ತಾಲ್ಲೂಕು ಕೇಂದ್ರಗಳ ಹೋಬಲಿಗಳ ಮಟ್ಟದಲ್ಲಿ ಜನವರಿ 02 ರಿಂದ 31 ರವರೆಗೆ “ಪವತಿ ಖಾತೆ ಆಂದೋಲನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸದುಪಯೋಗವನ್ನು ಸಕಾಲದಲ್ಲಿ ಪಡೆದುಕೊಳ್ಳಲು ಅರ್ಹ ಸಾರ್ವಜನಿಕರು ತಮ್ಮ ಜಮೀನುಗಳಿಗೆ ಸಂಬಂಧಿಸಿದ ಖಾತೆದಾರರು ಫವತಿಯಾಗಿದ್ದಲ್ಲಿ, ಇವರ ನಂತರ ಫವತಿ ವಾರಸು ಖಾತೆ ಬದಲಾವಣೆ ಮಾಡಿಕೊಳ್ಳಲು ಅರ್ಜಿಯೊಂದಿಗೆ ಜಮೀನಿಗೆ ಸಂಬಂಧಿಸಿದ ಪಹಣಿ, ಮೃತ ಖಾತೆದಾರರ ಮರಣ ಪ್ರಮಾಣಪತ್ರ, ವಂಶವೃಕ್ಷ ಹಾಗೂ ಇನ್ನಿತರೆ ಅಗತ್ಯ ದಾಖಲಾತಿಗಳೊಂದಿಗೆ ಗ್ರಾಮ ಆಡಳಿತಾಧಿಕಾರಿಗಳ ಬಳಿ ಮನವಿಗಳನ್ನು ಸಲ್ಲಿಸಿ ಫವತಿ ವಾರಸು ಖಾತೆ ಬದಲಾವಣೆಗಳನ್ನು ಮಾಡಿಸಿಕೊಳ್ಳಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.