ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ): ಸಾಮಾಜಿಕ ಸಮಾನತೆ ಹಾಗೂ ವ್ಯಕ್ತಿಗೌರವ ಕುವೆಂಪು ಸಾಹಿತ್ಯದ ಪ್ರಮುಖ ಅಂಶವಾಗಿದೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಸರಕಾರಿ ನೌಕರರ ಭವನದ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಶುಕ್ರವಾರ ಏರಡಿಸಿದ್ದ ಕುವೆಂಪು ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕುವೆಂಪು ಶ್ರೇಷ್ಠ ಕವಿ ಮಾತ್ರವಲ್ಲದೆ, ಪ್ರಖರ ಮಾನವತಾವಾದಿಯಾಗಿದ್ದರು ಎಂದು ಹೇಳಿದರು.
ತಾಲ್ಲೂಕಿನಲ್ಲಿ 2.350 ಕೋಟಿ ವೆಚ್ಚದಲ್ಲಿ ಜಲ ಜೀವನ ಮಿಷನ್ ಯೋಜನೆ ಮೂಲಕ ಪ್ರತಿ ಮನೆಗೂ ಕುಡಿಯುವ ನೀರು ಪೂರೈಸಲಾಗುವುದು. ಯುವ ಸಮುದಾಯಕ್ಕೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಪಟ್ಟಣದ ಹೊರವಲಯದಲ್ಲಿ ಕೈಗಾರಿಕಾ ಕ್ಷೇತ್ರ ಸ್ಥಾಪಿಸಲಾಗುವುದು.ತಾಲ್ಲೂಕಿನಿಂದ ಆಂಧ್ರಪ್ರದೇಶಕ್ಕೆ ಹರಿದುಹೋಗುವ ಮಳೆ ನೀರನ್ನು ತಾಲ್ಲೂಕಿನ ಕೆರೆಗಳಿಗೆ ಹರಿಸಲು ಅಗತ್ಯವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಸತ್ವತೋಮುಖ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಮಾತನಾಡಿ, ಕುವೆಂಪು ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಡ ಭಾಷೆಗೆ ಗೌರವ ತಂದುಕೊಟ್ಟಿದ್ದಾರೆ. ಸಾಹಿತಿಗಳಿಗೆ ಮಾದರಿಯಾಗಿ ಬದುಕಿದ್ದಾರೆ. ವಿದ್ಯಾರಿಗಳು ಅವರ ಸಾಹಿತ್ಯ ಕೃತಿಗಳನ್ನು ಓದಬೇಕು. ಅವರ ಆದರದ ಬೆಳಕಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಭೈರವೇಶ್ವರ ವಿದ್ಯಾನಿಕೇತನದ ನಿದ್ದೇಶಕ ಎ.ವೆಂಕಟರೆಡ್ಡಿ ಕುವೆಂಪು ಅವರ ಜೀವನ ಹಾಗೂ ಸಾಧನೆ ಕುರಿತು ಮಾತನಾಡಿ, ಕುವೆಂಪು ಪ್ರಕೃತಿಯ ಆರಾಧಕರಾಗಿದ್ದರು. ಅವರ ಸಾಹಿತ್ಯ ಕೃತಿಗಳಲ್ಲಿ ನಿಸರ್ಗ ಸೌಂದಯ್ಯ ಅಡಕವಾಗಿದೆ. ಅವರ ಕೃತಿಗಳಲ್ಲಿ ವ್ಯಕ್ತಿ, ವ್ಯಕ್ತಿತ್ವ ಹಾಗೂ ಸಾಮಾಜಿಕ ಒಡನಾಟ ಓದುಗರನ್ನು ಬೆರಗುಗೊಳಿಸುತ್ತದೆ ಎಂದು ಹೇಳಿದರು.
ಉಪ ತಹಶೀಲ್ದಾರ್ ಕೆ.ವಿ.ಜಯರಾಂ, ಶಿರಸ್ತೇದಾರ್ ಬಲರಾಮ ಚಂದ್ರೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿಲ್ವಹಣಾಧಿಕಾರಿ ಎಸ್.ಶಿವಕುಮಾರಿ, ಸಹಾಯಕ ಕೃಷಿ ನಿದ್ದೇಶಕ ಕೆ.ಸಿ.ಮಂಜುನಾಥ್, ಹಿರಿಯ ಸಹಾಯಕ ತೋಟಗಾರಿಕಾ ನಿದ್ದೇಶಕ ಎಂ.ಶ್ರೀನಿವಾಸನ್, ಸಹಾಯಕ ರೇಷ್ಮೆ ನಿರೇಶಕ ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ, ಬೆಸ್ಕಾಂ ಸಹಾಯಕ ಕಾರಪಾಲಕ ಎಂಜಿನಿಯರ್ ರಾಮತೀತ್ಥ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಪಾಲಕ ಎಂಜಿನಿಯರ್ ವಿ.ನಾರಾಯಣಸ್ವಾಮಿ, ಅಧಿಕಾರಿಗಳಾದ ನವೀನ್, ರಾಜೇಶ್, ರಾಮಕೃಷ್ಣಪ್ಪ, ಮಂಜುನಾಥ್, ಜನಾರನ್, ಹರಿ, ತಿಪ್ಪಣ್ಣ ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.