ಲಕ್ನೋ (www.vknews.in) : ರಷ್ಯಾದ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉದ್ಯೋಗಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮೀರತ್ನಲ್ಲಿ ಬಂಧಿಸಿದೆ. ಸತೇಂದ್ರ ಸಿವಾಲ್ ಬಂಧಿತ ವ್ಯಕ್ತಿಯಾಗಿದ್ದು, ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಆಗಿ ಕಾರ್ಯನಿರ್ವಹಿಸುತ್ತಿರು..
ಐಎಸ್ಐ ಹ್ಯಾಂಡ್ಲರ್ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳನ್ನು ಆಕರ್ಷಿಸಿ ಭಾರತೀಯ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗೆ ಬದಲಾಗಿ ಹಣಕಾಸಿನ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎಂದು ಎಟಿಎಸ್ ಗೆ ಗುಪ್ತಚರ ಮಾಹಿತಿ ಲಭ್ಯವಾಗಿತ್ತು. ಅದರಂತೆ ಕಾರ್ಯಾಚರಣೆಗಿಳಿದ ಭಯೋತ್ಪಾದನಾ ನಿಗ್ರಹ ದಳ ಆರೋಪಿಯನ್ನು ಬಂಧಿಸಿದೆ.
ಹಾಪುರ್ನ ಶಹಮಹಿಯುದ್ದೀನ್ಪುರ ಗ್ರಾಮದ ನಿವಾಸಿ ಸತೇಂದ್ರ ಸಿವಾಲ್ ಈ ಬೇಹುಗಾರಿಕೆ ಜಾಲದ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಗೌಪ್ಯ ದಾಖಲೆಗಳನ್ನು ಹೊರತೆಗೆಯುತ್ತಿದ್ದ ಎನ್ನಲಾಗಿದೆ. ಆರೋಪಿಗಳು ಹಣದ ದುರಾಸೆಗೆ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಸೇನಾ ಸಂಸ್ಥೆಗಳ ಕಾರ್ಯತಂತ್ರದ ಚಟುವಟಿಕೆಗಳಿಗೆ ಸಂಬಂಧಿಸಿದ ನಿರ್ಣಾಯಕ ಮಾಹಿತಿಯನ್ನು ISI ಹ್ಯಾಂಡ್ಲರ್ಗಳಿಗೆ ರವಾನಿಸಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿಯ ಕಾರ್ಯಚಟುವಟಿಕೆಯ ಮೇಲೆ ಎಟಿಎಸ್ ಕಣ್ಣಿಟ್ಟಿತ್ತು. ಬಳಿಕ ಸತೇಂದ್ರ ಸಿವಾಲ್ ನನ್ನು ವಿಚಾರಣೆಗಾಗಿ ಮೀರತ್ನಲ್ಲಿರುವ ಎಟಿಎಸ್ ಕ್ಷೇತ್ರ ಘಟಕಕ್ಕೆ ಕರೆಸಲಾಯಿತು. ವಿಚಾರಣೆಯ ಸಮಯದಲ್ಲಿ, ಆರೋಪಿ ತೃಪ್ತಿದಾಯಕ ಉತ್ತರಗಳನ್ನು ನೀಡಲು ವಿಫಲರಾಗಿದ್ದಾನೆ ಎಂದು ವರದಿಯಾಗಿದೆ. ಅಂತಿಮವಾಗಿ ಗೂಢಚಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಸತೇಂದ್ರ ಸಿವಾಲ್ 2021 ರಿಂದ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಭಾರತ ಆಧಾರಿತ ಭದ್ರತಾ ಸಹಾಯಕರಾಗಿ (IBSA) ಕೆಲಸ ಮಾಡುತ್ತಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.