ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ) : ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥವನ್ನು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ರವರು ಸ್ವಾಗತಿಸಿದರು. ಮೊದಲಿಗೆ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಮಾರ್ಲಾಪಣೆ ಮಾಡಿ ನಂತರ ನೂರಾರು ಶಾಲಾ ಮಕ್ಕಳೊಂದಿಗೆ ಹೆಜ್ಜೆ ಹಾಕಿ ಜಾಥ ಕಾರ್ಯಕ್ರಮದಲ್ಲಿ ಸಾಗಿ ಬಂದರು.ತದನಂತರ ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಆಯೋಜಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಶ್ರೀನಿವಾಸನ್. ಎಂ, ಸಹಾಯಕ ನಿರ್ದೇಶಕರು ರಾಜೇಶ್ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿಸಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು. ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಸಂಬಂಧಿಸಿದ ಭಾವ ಚಿತ್ರಗಳನ್ನು ಮತ್ತು ವಿಡಿಯೋ ತುಣುಕುಗಳನ್ನು ಹಾಗೂ ಜಾಥಾ ಕುರಿತು ಸಂಪೂರ್ಣ ವಿವರಗಳನ್ನು ಕಾಲ-ಕಾಲಕ್ಕೆ ಕೋಲಾರ ಜಿಲ್ಲೆಯ ಅಧೀಕೃತ Twitter ಖಾತೆಯಾದ SWD Kolar (kolarSocia79174)ಯಲ್ಲಿ ಸಾರ್ವಜನಿಕರು ಹಾಗೂ ಎಲ್ಲರ ವೀಕ್ಷಣೆಗಾಗಿ ಆಪ್-ಲೋಡ್ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಶ್ರೀನಿವಾಸನ್, ಎಂ ರವರು ತಿಳಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.