(www.vknews. in) ದಿನಾಂಕ ೧೮/೦೨/೨೦೨೪ನೆ ರವಿವಾರದಂದು ಕ ಸಾ ಪ ಇದರ ರಾಜ್ಯ ಅಧ್ಯಕ್ಷರಾದ ಶ್ರೀ ನಾಡೋಜ ಡಾ ಮಹೇಶ್ ಜೋಷಿಯವರು ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ಅವರ ಮಂಗಳೂರಿನ ಕದ್ರಿಯ ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು.
ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಬಗ್ಗೆ ಮತ್ತು ಜನರ ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ ಅನ್ನು ಹೇಗೆ ತಲುಪಬಹುದು ಎಂಬ ವಿಚಾರದ ಬಗ್ಗೆ ಗಹನವಾದ ಚರ್ಚೆ ನಡೆಸಿದರು. ಈ ಸಂಧರ್ಭ ದಲ್ಲಿ ಕ ಸಾ ಪ ಇದರ ಕೇಂದ್ರೀಯ ಮಾರ್ಗ್ ದರ್ಶಿ ಸಮಿತಿ ಸದಸ್ಯರಾದ ಡಾ ಮುರಲಿ ಮೋಹನ್ ಚೂಂತಾರು ಮತ್ತು ಕ ಸಾ ಪ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಮಂಜುನಾಥ ರೇವಣ್ಕರ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.