ಚಿಕ್ಕಮಗಳೂರು (www. vknews.in) : ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ..
ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿನಾಯಿ ಭೀಕರವಾಗಿ ದಾಳಿ ಮಾಡಿದೆ. ಈ ವೇಳೆ ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಬಂದು ನಾಯಿಯನ್ನು ಓಡಿಸಿ ಬಾಲಕನನ್ನು ರಕ್ಷಿಸಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೀದಿನಾಯಿಯ ದಾಳಿಯಿಂದಾಗಿ 8 ವರ್ಷ ವಯಸ್ಸಿನ ಮುಜಾಮಿಲ್ ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ನೆಲಕ್ಕೆ ಕೆಡವಿದ ನಾಯಿ ಕೆನ್ನೆಗೆ ಕಚ್ಚಿದ್ದು, ಇದರಿಂದಾಗಿ ಬಾಲಕನಿಗೆ ತೀವ್ರವಾಗಿ ಗಾಯವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.